4:18 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಆನೆ ದಂತ ಮಾರಾಟ ಯತ್ನ: 5 ಮಂದಿ ಸೆರೆ; ಜೂ 18 ರವರೆಗೆ ನ್ಯಾಯಾಂಗ ಬಂಧನ 

08/06/2022, 13:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಲ್ಲಿಗೆ ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ .

ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ . ಶಿವಕುಮಾರ್,ಮಸ್ಕಲ್  ಮರಡಿಯ ಕೆಲಸಗಾರ ಸುಂದರೇಶ್, ತರಿಕೆರೆ ತಾಲ್ಲೂಕು ನಂದಿಬಟ್ಟಲಿನ ಪಿ. ಮಹಾಂತೇಶ್, ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರಿನ  ವೆಲ್ಡರ್ ನೂರ್ ಅಹ್ಮದ್ ,ಚಿತ್ರದುರ್ಗ ತಾಲ್ಲೂಕಿನ  ಪಳಿಕೆಹಳ್ಳಿಯ ಅಂಜನಪ್ಪ ಬಂಧಿತರು.

ಅಲ್ಲಂಪುರ ಪೆಟ್ರೋಲ್ ಬಂಕ್ ಸಮೀಪ ಆನೆ ದಂತ ಮಾರಾಟಕ್ಕೆ ಯತ್ನಿಸಿದಾಗ ಇವರನ್ನು ಬಂಧಿಸಿದ್ದು ಆನೆ ದಂತ ಓಮ್ನಿ ವಾಹನ ವಶಪಡಿಸಿಕೊಳ್ಳಲಾಗಿದೆ .ಇಲ್ಲಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಭದ್ರಾ ವನ್ಯಜೀವಿ ವಲಯದಲ್ಲಿ ಆನೆದಂತ ತಂದಿರುವುದನ್ನು ಖಚಿತಪಡಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೂನ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ .

ಇತ್ತೀಚಿನ ಸುದ್ದಿ

ಜಾಹೀರಾತು