11:20 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಆನೆ ದಂತ ಮಾರಾಟ ಯತ್ನ: 5 ಮಂದಿ ಸೆರೆ; ಜೂ 18 ರವರೆಗೆ ನ್ಯಾಯಾಂಗ ಬಂಧನ 

08/06/2022, 13:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಲ್ಲಿಗೆ ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ .

ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ . ಶಿವಕುಮಾರ್,ಮಸ್ಕಲ್  ಮರಡಿಯ ಕೆಲಸಗಾರ ಸುಂದರೇಶ್, ತರಿಕೆರೆ ತಾಲ್ಲೂಕು ನಂದಿಬಟ್ಟಲಿನ ಪಿ. ಮಹಾಂತೇಶ್, ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರಿನ  ವೆಲ್ಡರ್ ನೂರ್ ಅಹ್ಮದ್ ,ಚಿತ್ರದುರ್ಗ ತಾಲ್ಲೂಕಿನ  ಪಳಿಕೆಹಳ್ಳಿಯ ಅಂಜನಪ್ಪ ಬಂಧಿತರು.

ಅಲ್ಲಂಪುರ ಪೆಟ್ರೋಲ್ ಬಂಕ್ ಸಮೀಪ ಆನೆ ದಂತ ಮಾರಾಟಕ್ಕೆ ಯತ್ನಿಸಿದಾಗ ಇವರನ್ನು ಬಂಧಿಸಿದ್ದು ಆನೆ ದಂತ ಓಮ್ನಿ ವಾಹನ ವಶಪಡಿಸಿಕೊಳ್ಳಲಾಗಿದೆ .ಇಲ್ಲಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಭದ್ರಾ ವನ್ಯಜೀವಿ ವಲಯದಲ್ಲಿ ಆನೆದಂತ ತಂದಿರುವುದನ್ನು ಖಚಿತಪಡಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೂನ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ .

ಇತ್ತೀಚಿನ ಸುದ್ದಿ

ಜಾಹೀರಾತು