1:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಆನೆ ದಂತ ಮಾರಾಟ ಯತ್ನ: 5 ಮಂದಿ ಸೆರೆ; ಜೂ 18 ರವರೆಗೆ ನ್ಯಾಯಾಂಗ ಬಂಧನ 

08/06/2022, 13:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಲ್ಲಿಗೆ ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ .

ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ . ಶಿವಕುಮಾರ್,ಮಸ್ಕಲ್  ಮರಡಿಯ ಕೆಲಸಗಾರ ಸುಂದರೇಶ್, ತರಿಕೆರೆ ತಾಲ್ಲೂಕು ನಂದಿಬಟ್ಟಲಿನ ಪಿ. ಮಹಾಂತೇಶ್, ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರಿನ  ವೆಲ್ಡರ್ ನೂರ್ ಅಹ್ಮದ್ ,ಚಿತ್ರದುರ್ಗ ತಾಲ್ಲೂಕಿನ  ಪಳಿಕೆಹಳ್ಳಿಯ ಅಂಜನಪ್ಪ ಬಂಧಿತರು.

ಅಲ್ಲಂಪುರ ಪೆಟ್ರೋಲ್ ಬಂಕ್ ಸಮೀಪ ಆನೆ ದಂತ ಮಾರಾಟಕ್ಕೆ ಯತ್ನಿಸಿದಾಗ ಇವರನ್ನು ಬಂಧಿಸಿದ್ದು ಆನೆ ದಂತ ಓಮ್ನಿ ವಾಹನ ವಶಪಡಿಸಿಕೊಳ್ಳಲಾಗಿದೆ .ಇಲ್ಲಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಭದ್ರಾ ವನ್ಯಜೀವಿ ವಲಯದಲ್ಲಿ ಆನೆದಂತ ತಂದಿರುವುದನ್ನು ಖಚಿತಪಡಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೂನ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ .

ಇತ್ತೀಚಿನ ಸುದ್ದಿ

ಜಾಹೀರಾತು