3:38 PM Thursday13 - February 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್… Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ… ಕಾಂಗ್ರೆಸ್‌ ಸರಕಾರ ಪ್ರಕರಣ ವಾಪಸ್‌ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ:… ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್,… ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ… ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್… ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ.…

ಇತ್ತೀಚಿನ ಸುದ್ದಿ

ಆಪ್‌ ಪಕ್ಷವನ್ನು ದೆಹಲಿ ಜನರು ತಿರಸ್ಕಾರ ಮಾಡಿದ್ದಾರೆ; ಇಂಡಿ ಒಕ್ಕೂಟ ಒಡೆದು ಚೂರಾಗಿದೆ: ಆರ್.ಅಶೋಕ್

09/02/2025, 09:37

ಬೆಂಗಳೂರು(reporterkarnataka.com): ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಪ್‌ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ ಸಿಕ್ಕಿರುವ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಆಪ್‌ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಅರವಿಂದ ಕೇಜ್ರಿವಾಲ್‌ ಆರಂಭದಲ್ಲಿ ಸರಳವಾದ ಕಾರಿನಲ್ಲಿ ಸಂಚರಿಸುತ್ತಿದ್ದರು. ಈಗ ದೊಡ್ಡ ಅರಮನೆ ಕಟ್ಟಿಕೊಂಡಿದ್ದು, ಐಷಾರಾಮಿ ಕಾರಿನಲ್ಲಿ ಸಂಚರಿಸುತ್ತಿದ್ದಾರೆ. ಅವರ ಆಡಳಿತವನ್ನು ನೋಡಿ ಜನರು ಬೇಸತ್ತಿದ್ದಾರೆ. ಯಮುನಾ ನದಿಯ ಬಗ್ಗೆ ಅವರು ಆಡಿದ ಮಾತು ಜನರಲ್ಲಿ ಬೇಸರ ತಂದಿದೆ. ಜನರು ಪ್ರತಿ ದಿನ ಕುಡಿಯುವ ನೀರಿನ ಬಗ್ಗೆ ಆಪಾದನೆ ಮಾಡಿದ್ದರು ಎಂದರು.
ಯಮುನಾ ನದಿಯನ್ನು ಸರ್ಕಾರ ಸ್ವಚ್ಛವಾಗಿ ಇಡಬೇಕಿತ್ತು. ಅದನ್ನು ಬಿಟ್ಟು ನದಿಯ ಮೇಲೆಯೇ ಆಪಾದನೆ ಮಾಡಿದ್ದರು. ಜೈಲಿಗೆ ಹೋದರೂ ರಾಜೀನಾಮೆ ನೀಡದೆ ಅಲ್ಲಿಯೇ ಕುಳಿತು ಕಡತಕ್ಕೆ ಸಹಿ ಹಾಕಿದ್ದರು. ಬೇರೆಯವರಿಗೆ ಅಧಿಕಾರವನ್ನು ವಹಿಸುವ ಬದಲು, ತಾವೇ ಅಧಿಕಾರ ಇಟ್ಟುಕೊಂಡು ಸರ್ಕಾರಿ ಕೆಲಸಗಳನ್ನು ಸ್ಥಗಿತಗೊಳಿಸಿದ್ದರು. ಇವರು ಭ್ರಷ್ಟಚಾರಿ ಎಂದು ಇಂಡಿ ಒಕ್ಕೂಟದ ನಾಯಕರೇ ಹೇಳಿದ್ದರು. ಮಳ್ಳಿಯಂತೆ ಬಂದು, ಕಳ್ಳನಂತೆ ಆಗಿದ್ದಾರೆ ಎಂಬುದು ಜನರಿಗೆ ಅರಿವಾಯಿತು ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಹಾಗೂ ಆಡಳಿತ ಬಿಜೆಪಿಯ ಗೆಲುವಿಗೆ ಬಲ ತಂದಿದೆ. ಇದು ಕೇಂದ್ರ ಸರ್ಕಾರದ ಆಡಳಿತಕ್ಕೆ ಸಂದ ಗೆಲುವು. ಜನರು ಇಂಡಿ ಒಕ್ಕೂಟವನ್ನು ತಿರಸ್ಕಾರ ಮಾಡಿದ್ದಾರೆ. ಇಂಡಿ ಒಕ್ಕೂಟ ಒಡೆದು ಚೂರಾಗಿದೆ. ಅಖಿಲೇಶ್‌ ಯಾದವ್‌, ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರೂ ಬೇರೆಯಾಗಿದ್ದಾರೆ. ರಾಹುಲ್‌ ಗಾಂಧಿಯೂ ಸೇರಿದಂತೆ ಒಂದೇ ಕುಟುಂಬದವರು ದೊಡ್ಡ ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ದೆಹಲಿಯ ಜನರು ಮೋದಿಯವರ ಆಡಳಿತಕ್ಕೆ ಬೆಲೆ ಕೊಟ್ಟಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು