3:13 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆಸೆ, ಆಮಿಷೆಯೊಡ್ಡಿ ಮತಾಂತರ ಮಾಡಲು ಅವಕಾಶ ಕೊಡೊಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

12/12/2021, 13:21

ಹುಬ್ಬಳ್ಳಿ(reporterkarnataka. com): ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಹಾಗಾಗಿ ಆಸೆ ಆಮಿಷೆಯೊಡ್ಡಿ ಮತಾಂತರ ಆಗುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯದ ನಾಯಕರ ಜತೆ ಮಾತುಕತೆ ನಡೆಸಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು. 

ಮತಾಂತರ ನಿಷೇಧ ಕಾಯಿದೆ ಚರ್ಚೆಗೆ ಮುನ್ನ ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿಯು ಕಾನೂನು ಇಲಾಖೆಯ ಸಮಿತಿ ಜತೆ ಮತಾಂತರದ ವಿಷಯವಾಗಿ ಸಂಪೂರ್ಣ ಪರಿಶೀಲನೆ ಮಾಡಲಿದೆ. ಸಮಿತಿ ನೀಡುವ ವರದಿ ಸಂಪುಟ ಸಭೆ ಮುಂದೆ ಬರುತ್ತದೆ.

ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ. ನಂತರ ವಿಧಾನಸಭೆಗೆ ಬಂದರೆ ಬೆಳಗಾವಿಯಲ್ಲಿಯೇ ಮತಾಂತರ ಕಾಯಿದೆ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಹ್ಯಾಕ್ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಪ್ರಧಾನಿಗಳು ಟ್ವಿಟರ್ ಹ್ಯಾಕ್ ಕುರಿತು ಮಾತನಾಡಿದ್ದಾರೆ. ಹಾಗಾಗಿ ತಪ್ಪಿತಸ್ಥರನ್ನು ಗುರುತಿಸಲು ಕಾರ್ಯಾಚರಣೆ ಕೂಡ ಮಾಡಲಾಗುತ್ತಿದೆ. ಅದಲ್ಲದೇ ಇಂತಹ ಹ್ಯಾಕ್ ಆಗುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿವೆ. ತಾಂತ್ರಿಕ ಬಲದಿಂದ ಅವುಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಅವರು ನುಡಿದರು. 

ರಾಜ್ಯದಲ್ಲಿ ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ಹೆಚ್ಚಿಸಲಾಗುವುದು, ಈಗಾಗಲೇ ಒಂದು ಜಿನೋಮಿಕ್ ಸ್ವಿಕ್ವೇನ್ಸ್ ಲ್ಯಾಬ್ ನ್ನು ಹೆಚ್ಚಿಗೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು