3:19 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಅಸ್ತಿ ನೋಂದಣಿಯಲ್ಲಿ ಭಾರಿ ಭ್ರಷ್ಟಾಚಾರ: ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ

30/10/2021, 11:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಬ್ ರಿಜಿಸ್ಟರ್ ಆಫೀಸ್ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿ ಕಡತಗಳ ಶೋಧಕಾರ್ಯ ಆರಂಭಿಸಿದ್ದಾರೆ.

ಆಸ್ತಿ ನೋಂದಣಿಗಾಗಿ ಸಾರ್ವಜನಿಕರಿಂದ ಕಾನೂನು ಬಾಹಿರವಾಗಿ ಸಿಕ್ಕಾಪಟ್ಟೆ ಹಣ ಕೀಳುತ್ತಿರುವ ಬಗ್ಗೆ ದೂರುಗಳು ಹೆಚ್ಚಾಗಿ ಬಂದಿರುವ ಹಿನ್ನೆಲೆಯಲ್ಲಿ, ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿ ಸೇರಿದಂತೆ ಪಟ್ಟಣದಲ್ಲಿನ 11 ಕ್ಕೂ ಹೆಚ್ಚು ಬಾಂಡ್ ರೈಟರ್ ಗಳ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗೃಹ ದಳ (ಎಸಿಬಿ) ದ ವತಿಯಿಂದ ದಾಳಿ ನಡೆಸಿದೆ.

ಎಸಿಬಿ (ಉತ್ತರ ವಲಯ) ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನ ಹಾಗೂ ಡಿವೈಎಸ್ಪಿಗಳಾದ ಕರುಣಾಕರ ಶೆಟ್ಟಿ ಮತ್ತು ಮಂಜುನಾಥ ಗಂಗಲ ಅವರ ನೇತೃತ್ವದಲ್ಲಿ 6 ಮಂದಿ ಇನ್ಸಪೆಕ್ಟರ್ ಗಳು ಮತ್ತು 30 ಕ್ಕೂ ಅಧಿಕ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಬ್ ರಿಜಿಸ್ಟರ್ ಕಚೇರಿ ಮೇಲೆ ನಡೆದಿರುವ ಅತಿದೊಡ್ಡ ದಾಳಿ ಇದಾಗಿದೆ ಎಂದು ಹೇಳಲಾಗುತ್ತಿದೆ.


ಇನ್ಸಪೆಕ್ಟರ್ ಗಳಾದ ಸುನಿಲಕುಮಾರ, ಅಡಿವೇಶ ಗುದಿಗೊಪ್ಪ, ವೀರಣ್ಣ ಹಳ್ಳಿ, ವಿಜಯ ಮಠಪತಿ, ಸಮೀರ್ ಮುಲ್ಲಾ ಮತ್ತು ಪರಮೇಶ್ವರ ಕವಟಗಿ ಹಾಗೂ ಸಿಬ್ಬಂದಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು