4:43 AM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಅಭಿ ಎನ್. ನಿರ್ದೇಶನದ ‘ಕ್ರಷ್’ ಕನ್ನಡ ಚಲನಚಿತ್ರ ಫೆ.2ರಂದು ರಾಜ್ಯಾದ್ಯಂತ ತೆರೆಗೆ

29/01/2024, 19:56

ಮಂಗಳೂರು(reporterkarnataka.com): ಸ್ಮೈಲಿYB ಕ್ರಿಯೇಷನ್ಸ್ ಬೆಂಗಳೂರು ಬ್ಯಾನರ್ ನಲ್ಲಿ ನಿರ್ಮಾಪಕರಾದ ಎಸ್. ಚಂದ್ರಮೋಹನ್ ನಿರ್ಮಾಣದ ‘ಕ್ರಷ್’ ಕನ್ನಡ ಚಲನಚಿತ್ರ ಫೆ.2ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.
ನಗರದಲ್ಲಿ ಭಾನುವಾರ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಅಭಿ ಎನ್. ಅವರು, ಇದೇ ಮೊದಲ ಬಾರಿ ಕನ್ನಡ ಚಿತ್ರವೊಂದನ್ನು ನಿರ್ದೇಶಿಸಿದ್ದು, ಚಿತ್ರ ಅತ್ಯುತ್ತಮವಾಗಿ ಮೂಡಿಬಂದಿದೆ. ಸಿನಿ ಪ್ರಿಯರಿಗೆ ಖಂಡಿತಾ ಈ ಚಿತ್ರ ಇಷ್ಟವಾಗಲಿದೆ ಎಂದರು.
ಚಿತ್ರದ ಬಹುತೇಕ ಚಿತ್ರೀಕರಣ ಬೆಂಗಳೂರು, ಸಕಲೇಶಪುರ ಮತ್ತು ಮಂಗಳೂರಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ನಡೆದಿದೆ. ಅತ್ಯುತ್ತಮ ಕಥಾ ಹಂದರವನ್ನು ಕ್ರಷ್ ಒಳಗೊಂಡಿದೆ. ಉತ್ತಮ ಹಾಡುಗಳೂ ಕೂಡ ಇದ್ದು, ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದವರು ತಿಳಿಸಿದರು.


ನಿರ್ಮಾಪಕ ಎಸ್.ಚಂದ್ರಮೋಹನ್ ಅವರು ಮಾತನಾಡಿ, ಇದೊಂದು ತಂದೆ ಮಗ ಮತ್ತು ತಾಯಿ ಮಗಳ ಬಾಂಧವ್ಯದ ಕಥಾಹಂದರವನ್ನು ಹೊಂದಿದ್ದು ಯುವ ಜನಾಂಗವನ್ನು ಆಕರ್ಷಿಸುವ ಸಾಕಷ್ಟು ಅಂಶಗಳನ್ನು ಸಿನಿಮಾ ಹೊಂದಿದೆ ಎಂದರು.
ಈ ಹಿಂದೆ ರಂಗ್ ಬಿರಂಗಿ ಮತ್ತು ಇದೇ ಅಂತರಂಗ ಶುದ್ಧಿ ಎಂಬ ಎರಡು ಸಿನಿಮಾಗಳ ಮೂಲಕ ಮನೆ ಮಾತಾಗಿದ್ದ ಪಂಚಾಕ್ಷರಿ ನಾಯಕನಟನಾಗಿ ನಟಿಸಿದ್ದು ಉತ್ತರ ಕರ್ನಾಟಕದ ಬೆಡಗಿ ಪ್ರತಿಭಾ ಸೊಪ್ಪಿಮಠ ನಾಯಕಿಯಾಗಿ ನಟಿಸಿದ್ದಾರೆ. ಅನುಭವ ಸಿನಿಮಾ ಖ್ಯಾತಿಯ ಅಭಿನಯರವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರದ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಹೆಸರಾಂತ ಪೋಷಕ ನಟ ಮಂಜುನಾಥ್ ಹೆಗ್ಗಡೆ, ಮಂಗಳೂರಿನ ವಿನೀತ್, ಸುಧೀರ್ ರಾಜ್ ಉರ್ವ, ಸಂತೋಷ್ ಕೊಲ್ಯ ರಂತಹ ಖ್ಯಾತ ನಟರು ಈ ಸಿನಿಮಾದ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಸಿ.ಎಸ್.ಸತೀಶ್ ಛಾಯಾಗ್ರಹಣ, ಸಂಕಲನಕಾರರಾಗಿ ಪವನ್, ವಿನೀತ್ ರಾಜ್ ಮೆನನ್ ರವರ ಸುಮಧುರ ಸಂಗೀತವಿದ್ದು, ಯು. ವಿ.ಅನುತ್ತಮ್ ಮತ್ತು ಅಭಿ .ಎನ್. ಸಾಹಿತ್ಯ ರಚಿಸಿದ್ದಾರೆ.
‘ಕ್ರಷ್ ’ ಹಾಡುಬಿಡುಗಡೆ ಸಂದರ್ಭ ನಟರಾದ ಸಂತೋಷ್ ಕೊಲ್ಯ, ಸಮರ್ಥ್, ನಟಿ ದಿವ್ಯಶ್ರೀ ಕಾವೂರು, ಸಹ ನಿರ್ದೇಶಕ ಜೈಚಂದ್ರ, ಗೀತೆ ರಚನೆಕಾರ ಅನುತ್ತಮ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು