2:00 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಭಿಮನ್ಯು ಆನೆಗೆ ಅನಾರೋಗ್ಯ: ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತ; ದುಬಾರೆ, ನಾಗರಹೊಳೆಗೆ ವಾಪಸ್

06/11/2022, 18:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ:ಕೆಲ ದಿನಗಳ ಹಿಂದೆ ಊರುಬಗೆ ಗ್ರಾಮಕ್ಕೆ ಆಪರೇಷನ್ ಭೈರ ಕಾರ್ಯಾಚರಣೆಗೆ ಆಗಮಿಸಿದ ಅಭಿಮನ್ಯು ಆನೆಗೆ ಅನಾರೋಗ್ಯ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.


ಜ್ವರ ಹಾಗೂ ಬೇದಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತಗೊಂಡಿದೆ.
ಕಾರ್ಯಾಚರಣೆಗೆ ಬಂದಿರುವ ಇನ್ನೆರಡು ಆನೆಗಳಾದ ಅಜಯ್, ಗೋಪಾಲಸ್ವಾಮಿ ಎಂಬ ಆನೆಗಳಿಗೆ ಮದ ಬಂದಿರುವುದರಿಂದ ಅವುಗಳನ್ನು ಕಾರ್ಯಾಚರಣೆಗೆ ಬಳಸಲು ಅಸಾಧ್ಯವಾಗಿದೆ.


ಇದರಿಂದಾಗಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು ಎಲ್ಲಾ ಸಾಕಾನೆಗಳನ್ನು ದುಬಾರೆ ಹಾಗೂ ನಾಗರಹೊಳೆಗೆ ಕಳಿಸಿಕೊಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು