4:48 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಸಲ್ಲ: ಶಾಸಕ ವೇದವ್ಯಾಸ ಕಾಮತ್ ಅಭಿಮತ

07/09/2022, 23:03

ಮಂಗಳೂರು(reporterkarnataka.com):ಮಂಗಳೂರು ನಗರವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಸಾರ್ವಜನಿಕರ ಸಹಕಾರ ಅತೀ ಅಗತ್ಯ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪಕಳಡ್ಕ ಸತ್ಯನಾರಾಯಣ ಭಜನಾ ಮಂದಿರದ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದ ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯವಿಲ್ಲ. ಅಭಿವೃದ್ಧಿಯ ವಿಚಾರದಲ್ಲಿ ಪಕ್ಷಭೇಧವಿಲ್ಲದೆ ಸಹಕಾರ ನೀಡಿದರೆ ರಾಜ್ಯದ ಮಾದರಿ ನಗರವಾಗುವುದರಲ್ಲಿ‌ ಸಂದೇಹವಿಲ್ಲ ಎಂದು ಹೇಳಿದ್ದಾರೆ.‌

ಈ‌ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಶೋಭಾ ಪೂಜಾರಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಬಿ.ರಾಮಚಂದ್ರ ಆಳ್ವ, ರವೀಂದ್ರ ಸೇಮಿತ,, ಭರತ್‌ರಾಜ್ ಶೆಟ್ಟಿ, ಸುದರ್ಶನ್,ಸದಾಶಿವ ದಾಸ್ ಕೆ. ರಮೇಶ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಬಜಾಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಅಧ್ಯಕ್ಷ ಜಯ.ಕೆ ಬಜಾಲ್ ಪ್ರಸ್ತಾಪಿಸಿದರು.ಉಪಾಧ್ಯಕ್ಷ ನಾಗೇಶ್ ಶೆಟ್ಟಿ ಬಜಾಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಮೇಶ್ ಸಾಲ್ಯಾಯನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು