4:23 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಅಬುದಾಬಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಹಿಂದೂ ದೇಗುಲಕ್ಕೆ ಭಾರತೀಯರಿಂದ ಇಟ್ಟಿಗೆ ಪೂಜೆ

30/05/2023, 21:23

ಮಂಗಳೂರು(reporterkarnataka.com): ಇದೇ ಬರುವ ಫೆಬ್ರವರಿಯಲ್ಲಿ ಅಬುದಾಬಿಯಲ್ಲಿ ಸಮರ್ಪಣೆಯಾಗಲಿರುವ ಅರಬ್ ರಾಷ್ಟ್ರದ ಪ್ರಥಮ ಬೃಹತ್ ಹಿಂದೂ ದೇವಸ್ಥಾನಕ್ಕೆ ಯೂಥ್ ಆಫ್ ಜಿ ಎಸ್ ಬಿ ತಂಡ ಹಾಗೂ ತನ್ನೊಂದಿಗೆ ಆಗಮಿಸಿದ ಸುಮಾರು 130 ಜಿ ಎಸ್ ಬಿ ಸಮುಯದಾಯದ ಮಂದಿ ಭೇಟಿ ನೀಡಿ ಮಂದಿರ ನಿರ್ಮಾಣಕ್ಕೆ ಉಪಯೋಗವಾಗುವ ಇಟ್ಟಿಗೆಗೆ ಪೂಜೆ ಸಲ್ಲಿಸಿ ದೇಣಿಗೆ ಸಮರ್ಪಿಸಿದರು.
2018ರಲ್ಲಿ ಮಂದಿರ ನಿರ್ಮಾಣಕ್ಕೆ ಚಾಲನೆ ದೊರಕಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಪ್ರೊಜೆಕ್ಟ್ ಕಾಮಗಾರಿಗೆ ಚಾಲನೆ ನೀಡಿದ್ದರು. ಸುಮಾರು 55 ಸಾವಿರ ಚದರ ಕಿ ಮೀ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಹಿಂದೂ ಮಂದಿರದಲ್ಲಿ ಸ್ವಾಮಿ ನಾರಾಯಣ, ವೆಂಕಟರಮಣ, ರಾಮ, ಕೃಷ್ಣ, ಶಿವ , ಅಯ್ಯಪ್ಪ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಾಗುತ್ತದೆ.
ಬ್ಯಾಪ್ಸ್ ಸಂಸ್ಥೆ ಮಂದಿರ ನಿರ್ಮಾಣದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದು ಮಂದಿರದ ಆವರಣದಲ್ಲಿ ಧಾರ್ಮಿಕ ಪ್ರವಚನದ ಸಭಾಂಗಣ, ಕ್ರೀಡಾಂಗಣ, ಪವಿತ್ರ ನದಿಗಳ ತೀರ್ಥ ಒಳಗೊಂಡ ಕೆರೆ, ಯೋಗ ಮಂಟಪ, ಕಲಾ ಮಂಟಪ ಕೂಡ ನಿರ್ಮಾಣಗೊಳ್ಳಲಾಗಿದೆ ಎಂದು ತಿಳಿಸಲಾಯಿತು.
ದೂರದ ಭಾರತದಿಂದ ಭಕ್ತಾದಿಗಳಾಗಿ ಭಾಗವಹಿಸಿದ ಯೂಥ್ ಆಫ್ ಜಿ ಎಸ್ ಬಿ ತಂಡಕ್ಕೆ ಬ್ಯಾಪ್ಸ್ ಸಂಸ್ಥೆ ಮಂದಿರದ ಸಂಪೂರ್ಣ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಇಟ್ಟಿಗೆಗೆ ಪೂಜೆಯನ್ನೂ ನೆರವೇರಿಸಲಾಯಿತು.

ಜೀವಮಾನದ ಅವಿಸ್ಮರಣೀಯ ಘಟನೆಗಳಲ್ಲಿ ಇದು ಒಂದಾಗಿದ್ದು ವಿದೇಶದಲ್ಲಿ ಅದು ಕೂಡ ಇಸ್ಲಾಂ ರಾಷ್ಟ್ರದಲ್ಲಿ ನಿರ್ಮಾಣವಾಗುತ್ತಿರುವ ಜಗತ್ತಿನ ಏಕೈಕ ಬೃಹತ್ ಹಿಂದೂ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದು ನಮಗೆ ದೊರೆತ ದೊಡ್ಡ ಭಾಗ್ಯ ಎಂದು ಸಮುದಾಯದ ಅನೇಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.
ಹನುಮಂತ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ, ಚೇತನ್ ಕಾಮತ್, ನರೇಶ್ ಪ್ರಭು, ಸಂತೋಷ್ ಭಂಡಾರಿ, ಗೋಪಾಲಕೃಷ್ಣ ಭಟ್, ಸುಜಿತ್ ಬಾಳಿಗಾ ಹಾಗೂ ಇತರರು ಉಪಸ್ಥಿತರಿದ್ದರು.
ಮೊದಲ ಅಂತರರಾಷ್ಟ್ರೀಯ ಜಿ ಎಸ್ ಬಿ ಸಮ್ಮೇಳನದ ಅಂಗವಾಗಿ ದುಬೈ ಗೆ ಜಿ ಎಸ್ ಬಿ ಸಮುದಾಯ ಪ್ರವಾಸ ಕೈಗೊಂಡಿದ್ದು ಈ ನಡುವೆ ಮಂದಿರಕ್ಕೆ ಭೇಟಿ ನೀಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು