3:36 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಬುದಾಬಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಹಿಂದೂ ದೇಗುಲಕ್ಕೆ ಭಾರತೀಯರಿಂದ ಇಟ್ಟಿಗೆ ಪೂಜೆ

30/05/2023, 21:23

ಮಂಗಳೂರು(reporterkarnataka.com): ಇದೇ ಬರುವ ಫೆಬ್ರವರಿಯಲ್ಲಿ ಅಬುದಾಬಿಯಲ್ಲಿ ಸಮರ್ಪಣೆಯಾಗಲಿರುವ ಅರಬ್ ರಾಷ್ಟ್ರದ ಪ್ರಥಮ ಬೃಹತ್ ಹಿಂದೂ ದೇವಸ್ಥಾನಕ್ಕೆ ಯೂಥ್ ಆಫ್ ಜಿ ಎಸ್ ಬಿ ತಂಡ ಹಾಗೂ ತನ್ನೊಂದಿಗೆ ಆಗಮಿಸಿದ ಸುಮಾರು 130 ಜಿ ಎಸ್ ಬಿ ಸಮುಯದಾಯದ ಮಂದಿ ಭೇಟಿ ನೀಡಿ ಮಂದಿರ ನಿರ್ಮಾಣಕ್ಕೆ ಉಪಯೋಗವಾಗುವ ಇಟ್ಟಿಗೆಗೆ ಪೂಜೆ ಸಲ್ಲಿಸಿ ದೇಣಿಗೆ ಸಮರ್ಪಿಸಿದರು.
2018ರಲ್ಲಿ ಮಂದಿರ ನಿರ್ಮಾಣಕ್ಕೆ ಚಾಲನೆ ದೊರಕಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಪ್ರೊಜೆಕ್ಟ್ ಕಾಮಗಾರಿಗೆ ಚಾಲನೆ ನೀಡಿದ್ದರು. ಸುಮಾರು 55 ಸಾವಿರ ಚದರ ಕಿ ಮೀ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಹಿಂದೂ ಮಂದಿರದಲ್ಲಿ ಸ್ವಾಮಿ ನಾರಾಯಣ, ವೆಂಕಟರಮಣ, ರಾಮ, ಕೃಷ್ಣ, ಶಿವ , ಅಯ್ಯಪ್ಪ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಾಗುತ್ತದೆ.
ಬ್ಯಾಪ್ಸ್ ಸಂಸ್ಥೆ ಮಂದಿರ ನಿರ್ಮಾಣದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದು ಮಂದಿರದ ಆವರಣದಲ್ಲಿ ಧಾರ್ಮಿಕ ಪ್ರವಚನದ ಸಭಾಂಗಣ, ಕ್ರೀಡಾಂಗಣ, ಪವಿತ್ರ ನದಿಗಳ ತೀರ್ಥ ಒಳಗೊಂಡ ಕೆರೆ, ಯೋಗ ಮಂಟಪ, ಕಲಾ ಮಂಟಪ ಕೂಡ ನಿರ್ಮಾಣಗೊಳ್ಳಲಾಗಿದೆ ಎಂದು ತಿಳಿಸಲಾಯಿತು.
ದೂರದ ಭಾರತದಿಂದ ಭಕ್ತಾದಿಗಳಾಗಿ ಭಾಗವಹಿಸಿದ ಯೂಥ್ ಆಫ್ ಜಿ ಎಸ್ ಬಿ ತಂಡಕ್ಕೆ ಬ್ಯಾಪ್ಸ್ ಸಂಸ್ಥೆ ಮಂದಿರದ ಸಂಪೂರ್ಣ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಇಟ್ಟಿಗೆಗೆ ಪೂಜೆಯನ್ನೂ ನೆರವೇರಿಸಲಾಯಿತು.

ಜೀವಮಾನದ ಅವಿಸ್ಮರಣೀಯ ಘಟನೆಗಳಲ್ಲಿ ಇದು ಒಂದಾಗಿದ್ದು ವಿದೇಶದಲ್ಲಿ ಅದು ಕೂಡ ಇಸ್ಲಾಂ ರಾಷ್ಟ್ರದಲ್ಲಿ ನಿರ್ಮಾಣವಾಗುತ್ತಿರುವ ಜಗತ್ತಿನ ಏಕೈಕ ಬೃಹತ್ ಹಿಂದೂ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದು ನಮಗೆ ದೊರೆತ ದೊಡ್ಡ ಭಾಗ್ಯ ಎಂದು ಸಮುದಾಯದ ಅನೇಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.
ಹನುಮಂತ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ, ಚೇತನ್ ಕಾಮತ್, ನರೇಶ್ ಪ್ರಭು, ಸಂತೋಷ್ ಭಂಡಾರಿ, ಗೋಪಾಲಕೃಷ್ಣ ಭಟ್, ಸುಜಿತ್ ಬಾಳಿಗಾ ಹಾಗೂ ಇತರರು ಉಪಸ್ಥಿತರಿದ್ದರು.
ಮೊದಲ ಅಂತರರಾಷ್ಟ್ರೀಯ ಜಿ ಎಸ್ ಬಿ ಸಮ್ಮೇಳನದ ಅಂಗವಾಗಿ ದುಬೈ ಗೆ ಜಿ ಎಸ್ ಬಿ ಸಮುದಾಯ ಪ್ರವಾಸ ಕೈಗೊಂಡಿದ್ದು ಈ ನಡುವೆ ಮಂದಿರಕ್ಕೆ ಭೇಟಿ ನೀಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು