4:58 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಬುದಾಬಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಹಿಂದೂ ದೇಗುಲಕ್ಕೆ ಭಾರತೀಯರಿಂದ ಇಟ್ಟಿಗೆ ಪೂಜೆ

30/05/2023, 21:23

ಮಂಗಳೂರು(reporterkarnataka.com): ಇದೇ ಬರುವ ಫೆಬ್ರವರಿಯಲ್ಲಿ ಅಬುದಾಬಿಯಲ್ಲಿ ಸಮರ್ಪಣೆಯಾಗಲಿರುವ ಅರಬ್ ರಾಷ್ಟ್ರದ ಪ್ರಥಮ ಬೃಹತ್ ಹಿಂದೂ ದೇವಸ್ಥಾನಕ್ಕೆ ಯೂಥ್ ಆಫ್ ಜಿ ಎಸ್ ಬಿ ತಂಡ ಹಾಗೂ ತನ್ನೊಂದಿಗೆ ಆಗಮಿಸಿದ ಸುಮಾರು 130 ಜಿ ಎಸ್ ಬಿ ಸಮುಯದಾಯದ ಮಂದಿ ಭೇಟಿ ನೀಡಿ ಮಂದಿರ ನಿರ್ಮಾಣಕ್ಕೆ ಉಪಯೋಗವಾಗುವ ಇಟ್ಟಿಗೆಗೆ ಪೂಜೆ ಸಲ್ಲಿಸಿ ದೇಣಿಗೆ ಸಮರ್ಪಿಸಿದರು.
2018ರಲ್ಲಿ ಮಂದಿರ ನಿರ್ಮಾಣಕ್ಕೆ ಚಾಲನೆ ದೊರಕಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಪ್ರೊಜೆಕ್ಟ್ ಕಾಮಗಾರಿಗೆ ಚಾಲನೆ ನೀಡಿದ್ದರು. ಸುಮಾರು 55 ಸಾವಿರ ಚದರ ಕಿ ಮೀ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಹಿಂದೂ ಮಂದಿರದಲ್ಲಿ ಸ್ವಾಮಿ ನಾರಾಯಣ, ವೆಂಕಟರಮಣ, ರಾಮ, ಕೃಷ್ಣ, ಶಿವ , ಅಯ್ಯಪ್ಪ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಾಗುತ್ತದೆ.
ಬ್ಯಾಪ್ಸ್ ಸಂಸ್ಥೆ ಮಂದಿರ ನಿರ್ಮಾಣದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದು ಮಂದಿರದ ಆವರಣದಲ್ಲಿ ಧಾರ್ಮಿಕ ಪ್ರವಚನದ ಸಭಾಂಗಣ, ಕ್ರೀಡಾಂಗಣ, ಪವಿತ್ರ ನದಿಗಳ ತೀರ್ಥ ಒಳಗೊಂಡ ಕೆರೆ, ಯೋಗ ಮಂಟಪ, ಕಲಾ ಮಂಟಪ ಕೂಡ ನಿರ್ಮಾಣಗೊಳ್ಳಲಾಗಿದೆ ಎಂದು ತಿಳಿಸಲಾಯಿತು.
ದೂರದ ಭಾರತದಿಂದ ಭಕ್ತಾದಿಗಳಾಗಿ ಭಾಗವಹಿಸಿದ ಯೂಥ್ ಆಫ್ ಜಿ ಎಸ್ ಬಿ ತಂಡಕ್ಕೆ ಬ್ಯಾಪ್ಸ್ ಸಂಸ್ಥೆ ಮಂದಿರದ ಸಂಪೂರ್ಣ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಇಟ್ಟಿಗೆಗೆ ಪೂಜೆಯನ್ನೂ ನೆರವೇರಿಸಲಾಯಿತು.

ಜೀವಮಾನದ ಅವಿಸ್ಮರಣೀಯ ಘಟನೆಗಳಲ್ಲಿ ಇದು ಒಂದಾಗಿದ್ದು ವಿದೇಶದಲ್ಲಿ ಅದು ಕೂಡ ಇಸ್ಲಾಂ ರಾಷ್ಟ್ರದಲ್ಲಿ ನಿರ್ಮಾಣವಾಗುತ್ತಿರುವ ಜಗತ್ತಿನ ಏಕೈಕ ಬೃಹತ್ ಹಿಂದೂ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದು ನಮಗೆ ದೊರೆತ ದೊಡ್ಡ ಭಾಗ್ಯ ಎಂದು ಸಮುದಾಯದ ಅನೇಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.
ಹನುಮಂತ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ, ಚೇತನ್ ಕಾಮತ್, ನರೇಶ್ ಪ್ರಭು, ಸಂತೋಷ್ ಭಂಡಾರಿ, ಗೋಪಾಲಕೃಷ್ಣ ಭಟ್, ಸುಜಿತ್ ಬಾಳಿಗಾ ಹಾಗೂ ಇತರರು ಉಪಸ್ಥಿತರಿದ್ದರು.
ಮೊದಲ ಅಂತರರಾಷ್ಟ್ರೀಯ ಜಿ ಎಸ್ ಬಿ ಸಮ್ಮೇಳನದ ಅಂಗವಾಗಿ ದುಬೈ ಗೆ ಜಿ ಎಸ್ ಬಿ ಸಮುದಾಯ ಪ್ರವಾಸ ಕೈಗೊಂಡಿದ್ದು ಈ ನಡುವೆ ಮಂದಿರಕ್ಕೆ ಭೇಟಿ ನೀಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು