12:19 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಎಬಿವಿಪಿ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಗೆ ಸನ್ಮಾನ

06/02/2022, 12:34

ಮಂಗಳೂರು(reporterkarnataka.com): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಫೆಬ್ರವರಿ 5 ರಂದು ಬಿ.ಸಿ. ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು.


ಕಾರ್ಯಕ್ರವನ್ನು ಮಂಗಳೂರು ಇಂಡಿಯಾನಾ ಹಾಸ್ಪಿಟಲ್ ಫಿಸಿಯೋಥರಪಿ ವಿಭಾಗದ ಮುಖ್ಯಸ್ಥ ಹಾಗೂ ಮಾಜಿ ಯೋಧ ಡಾ. ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಅವರನ್ನು ವಿದ್ಯಾರ್ಥಿ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು.

ಅಭ್ಯಾಸ ವರ್ಗದ ಮೊದಲ ಅವಧಿಯಾದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಇವರ ನಡೆಸಿಕೊಟ್ಟರು.

ಎರಡನೇ ಅವಧಿ ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ಅವರು ನಡೆಸಿಕೊಟ್ಟರು. 

ಅಭ್ಯಾಸ ವರ್ಗದ ಮೂರನೇ ಅವಧಿ ಹೋರಾಟವನ್ನು ಚಟುವಟಿಕೆಗಳ ಮೂಲಕ ಪ್ರಾತ್ಯಕ್ಷಿಕೆಯ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನಡೆಸಿಕೊಟ್ಟರು. 

ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ಎಬಿವಿಪಿ ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು. 


ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲೇಶ್ ಉಪಸ್ಥಿತರಿದ್ದರು. ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು