3:44 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಎಬಿವಿಪಿ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಗೆ ಸನ್ಮಾನ

06/02/2022, 12:34

ಮಂಗಳೂರು(reporterkarnataka.com): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಫೆಬ್ರವರಿ 5 ರಂದು ಬಿ.ಸಿ. ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು.


ಕಾರ್ಯಕ್ರವನ್ನು ಮಂಗಳೂರು ಇಂಡಿಯಾನಾ ಹಾಸ್ಪಿಟಲ್ ಫಿಸಿಯೋಥರಪಿ ವಿಭಾಗದ ಮುಖ್ಯಸ್ಥ ಹಾಗೂ ಮಾಜಿ ಯೋಧ ಡಾ. ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಅವರನ್ನು ವಿದ್ಯಾರ್ಥಿ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು.

ಅಭ್ಯಾಸ ವರ್ಗದ ಮೊದಲ ಅವಧಿಯಾದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಇವರ ನಡೆಸಿಕೊಟ್ಟರು.

ಎರಡನೇ ಅವಧಿ ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ಅವರು ನಡೆಸಿಕೊಟ್ಟರು. 

ಅಭ್ಯಾಸ ವರ್ಗದ ಮೂರನೇ ಅವಧಿ ಹೋರಾಟವನ್ನು ಚಟುವಟಿಕೆಗಳ ಮೂಲಕ ಪ್ರಾತ್ಯಕ್ಷಿಕೆಯ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನಡೆಸಿಕೊಟ್ಟರು. 

ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ಎಬಿವಿಪಿ ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು. 


ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲೇಶ್ ಉಪಸ್ಥಿತರಿದ್ದರು. ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು