6:27 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಎಬಿವಿಪಿ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಗೆ ಸನ್ಮಾನ

06/02/2022, 12:34

ಮಂಗಳೂರು(reporterkarnataka.com): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಫೆಬ್ರವರಿ 5 ರಂದು ಬಿ.ಸಿ. ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು.


ಕಾರ್ಯಕ್ರವನ್ನು ಮಂಗಳೂರು ಇಂಡಿಯಾನಾ ಹಾಸ್ಪಿಟಲ್ ಫಿಸಿಯೋಥರಪಿ ವಿಭಾಗದ ಮುಖ್ಯಸ್ಥ ಹಾಗೂ ಮಾಜಿ ಯೋಧ ಡಾ. ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಅವರನ್ನು ವಿದ್ಯಾರ್ಥಿ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು.

ಅಭ್ಯಾಸ ವರ್ಗದ ಮೊದಲ ಅವಧಿಯಾದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಇವರ ನಡೆಸಿಕೊಟ್ಟರು.

ಎರಡನೇ ಅವಧಿ ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ಅವರು ನಡೆಸಿಕೊಟ್ಟರು. 

ಅಭ್ಯಾಸ ವರ್ಗದ ಮೂರನೇ ಅವಧಿ ಹೋರಾಟವನ್ನು ಚಟುವಟಿಕೆಗಳ ಮೂಲಕ ಪ್ರಾತ್ಯಕ್ಷಿಕೆಯ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನಡೆಸಿಕೊಟ್ಟರು. 

ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ಎಬಿವಿಪಿ ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು. 


ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲೇಶ್ ಉಪಸ್ಥಿತರಿದ್ದರು. ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು