10:05 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಎಬಿವಿಪಿ: ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬಾವುಟಗುಡ್ಡದ ವರೆಗೆ ಬೃಹತ್ ತಿರಂಗ ಯಾತ್ರೆ

13/08/2022, 21:26

ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ ಸ್ವತಂತ್ರ ಧ್ವಜವನ್ನು ಹಾರಿಸಿ ಹೋರಾಟ ಮಾಡಿದ ಬಾವುಟಗುಡ್ಡದವರೆಗೆ ಬೃಹತ್ ತಿರಂಗ ಯಾತ್ರೆಯನ್ನು ಮಾಡಲಾಯಿತು.

ಸ್ವತಂತ್ರ ಭಾರತದ ಹೋರಾಟಕ್ಕಾಗಿ ಮೊದಲ ಸ್ವಾತಂತ್ರ ಧ್ವಜವನ್ನು ಹಾರಿಸಿ ಸ್ವತಂತ್ರವನ್ನ ಘೋಷಿಸಿಕೊಂಡ ಸ್ಥಳ ಬಾವುಟಗುಡ್ಡ ಆ ಸ್ಥಳವನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಮಣೆಕಂಠ ಕಳಸಾ ಮಾತನಾಡಿದರು. 


ಮಂಜೆಶ್ವರ ಗೋವಿಂದ ಪೈ ವೃತ್ತದಿಂದ ಬಾವುಟ ಗುಡ್ಡದವರೆಗೆ ನೂರಾರು ವಿದ್ಯಾರ್ಥಿಗಳು ತಿರಂಗವನ್ನು ಹಿಡಿದು, ಭಾರತ್ ಮಾತಾ ಕಿ ಜೈ ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಾ ತಿರಂಗ ಯಾತ್ರೆಯಲ್ಲಿ ಭಾಗವಹಿಸಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಶಾಖೆ ವತಿಯಿಂದ 75ನೇ ಸ್ವತಂತ್ರ ದಿನದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.

ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವೆಲ್ಲರೂ ಸ್ವತಂತ್ರದ ಹೋರಾಟಕ್ಕೆ ಸಾಕ್ಷಿಯಾದ ಸ್ಥಳಗಳ ವ್ಯಕ್ತಿಗಳ ಇತಿಹಾಸವನ್ನು ಇಂದಿನ ಯುವಜನತೆ ತಿಳಿದುಕೊಳ್ಳಬೇಕೆಂಬುವುದು ವಿದ್ಯಾರ್ಥಿ ಪರಿಷತ್ ಆಶಯ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸ್ವತಂತ್ರ ದಿನದ ಪ್ರಯುಕ್ತ ವಿದ್ಯಾರ್ಥಿ ಪರಿಷತ್ ನ ನೇತೃತ್ವದಲ್ಲಿ ತಿರಂಗ ಯಾತ್ರೆಗಳಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಮಂಗಳೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ವಿದ್ಯಾರ್ಥಿ ಸಮುದಾಯ ತಮ್ಮ ಶಿಕ್ಷಣದ ಜೊತೆಗೆ ಸ್ವತಂತ್ರ ಹೋರಾಟಕ್ಕಾಗಿ ಹೋರಾಡಿದ ವ್ಯಕ್ತಿಗಳ ಚರಿತ್ರೆಗಳನ್ನು ಅಧ್ಯಯನ ಮಾಡುವ ಪ್ರವೃತ್ತಿಯನ್ನು ಹೊಂದಬೇಕು ಎಂದರು. ತಮ್ಮ ಶಿಕ್ಷಣದ ನಂತರ ಹೋಗುವ ಎಲ್ಲ ಕ್ಷೇತ್ರಗಳಲ್ಲಿ ನಾನು ಮಾಡುವ ಕೆಲಸ ದೇಶಕ್ಕೆ ಒಳಿತನ್ನ ಮಾಡುವ ಹಾಗೆ ನಮ್ಮ ಕಾರ್ಯ ಇರಬೇಕು ಎಂದರು. 

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶ್ರೇಯಸ್ ಶೆಟ್ಟಿ, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ಶ್ರೀಲಕ್ಷ್ಮಿ ಮಠದಮೂಲೆ, ನಗರ ಕಾರ್ಯದರ್ಶಿ ಆದಿತ್ಯ ಶೆಟ್ಟಿ, ಪ್ರಮುಖರಾದ ಸ್ಕಂದ ಕಿರಣ, ಶ್ರೀಪಾದ ತಂತ್ರಿ, ಸುಶಾಂತ, ಮೇಘನಾ, ಪ್ರತಿಕ್ಷಾ, ಹರ್ಷಿತಾ, ಸಂತೋಷ ರೈ, ರಂಜಿತ, ರಾಹುಲ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು