8:00 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು‌ ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

16/03/2022, 21:28

ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್‌ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್ಲಿ ದೊರೆತ ಅಕ್ರಮ ಆಸ್ತಿ ವಿವರ ಇಲ್ಲಿದೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ದಯಾಳ್ ಸುಂದರ್ ಅವರು ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಯಾಳ್ ಅವರು

ಕದ್ರಿ ಕಂಬಳ ಬಳಿ ಸ್ವಂತ ಅಪಾರ್ಟ್‌ಮೆಂಟ್ ಹೊಂದಿದ್ದಾರೆ. ಆದರೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಎಸಿಬಿ ದಾಳಿ ವೇಳೆ

ಬೆಂದೂರ್‌ವೆಲ್‌ನ ಬಾಡಿಗೆ ಮನೆಯಲ್ಲಿ 4 ಕೆ.ಜಿ ಬೆಳ್ಳಿ, 300 ಗ್ರಾಂ ಚಿನ್ನ ಹಾಗೂ ನಗದು ಪತ್ತೆಯಾಗಿದೆ. ನಗದು ಮೊತ್ತ ಇನ್ನೂ ದೃಢಪಟ್ಟಿಲ್ಲ.

ಮಂಗಳೂರು ಮತ್ತು ಮೈಸೂರಿನಲ್ಲಿ ಆಸ್ತಿ ಹೊಂದಿದ್ದಾರೆ. ಮೈಸೂರಿನಲ್ಲಿ 2 ಸೈಟ್, ಹುಣಸೂರಿನಲ್ಲಿ ಒಂದು ಸೈಟ್ ಮತ್ತು 2 ಎಕರೆ ಕೃಷಿ ಭೂಮಿಯ ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿದೆ. ಕೋಟ್ಯಂತರ ರೂ. ಮೌಲ್ಯದ ಜಾಗದ ದಾಖಲೆಗಳನ್ನು ಎಸಿಬಿ ತಂಡ ವಶಕ್ಕೆ ಪಡೆದುಕೊಂಡಿದೆ.

ಬಾಡಿಗೆ ಮನೆ,  ಅಪಾರ್ಟ್‌ಮೆಂಟ್ ಮತ್ತು ಕುಲಶೇಖರ ಕಚೇರಿ ಮೇಲೆ ಎಸಿಬಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಪ್ರಕಾಶ್, ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಹಾಗೂ ಕಾರವಾರ ಎಸಿಬಿ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು