8:38 AM Monday10 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು‌ ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

16/03/2022, 21:28

ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್‌ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್ಲಿ ದೊರೆತ ಅಕ್ರಮ ಆಸ್ತಿ ವಿವರ ಇಲ್ಲಿದೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ದಯಾಳ್ ಸುಂದರ್ ಅವರು ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಯಾಳ್ ಅವರು

ಕದ್ರಿ ಕಂಬಳ ಬಳಿ ಸ್ವಂತ ಅಪಾರ್ಟ್‌ಮೆಂಟ್ ಹೊಂದಿದ್ದಾರೆ. ಆದರೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಎಸಿಬಿ ದಾಳಿ ವೇಳೆ

ಬೆಂದೂರ್‌ವೆಲ್‌ನ ಬಾಡಿಗೆ ಮನೆಯಲ್ಲಿ 4 ಕೆ.ಜಿ ಬೆಳ್ಳಿ, 300 ಗ್ರಾಂ ಚಿನ್ನ ಹಾಗೂ ನಗದು ಪತ್ತೆಯಾಗಿದೆ. ನಗದು ಮೊತ್ತ ಇನ್ನೂ ದೃಢಪಟ್ಟಿಲ್ಲ.

ಮಂಗಳೂರು ಮತ್ತು ಮೈಸೂರಿನಲ್ಲಿ ಆಸ್ತಿ ಹೊಂದಿದ್ದಾರೆ. ಮೈಸೂರಿನಲ್ಲಿ 2 ಸೈಟ್, ಹುಣಸೂರಿನಲ್ಲಿ ಒಂದು ಸೈಟ್ ಮತ್ತು 2 ಎಕರೆ ಕೃಷಿ ಭೂಮಿಯ ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿದೆ. ಕೋಟ್ಯಂತರ ರೂ. ಮೌಲ್ಯದ ಜಾಗದ ದಾಖಲೆಗಳನ್ನು ಎಸಿಬಿ ತಂಡ ವಶಕ್ಕೆ ಪಡೆದುಕೊಂಡಿದೆ.

ಬಾಡಿಗೆ ಮನೆ,  ಅಪಾರ್ಟ್‌ಮೆಂಟ್ ಮತ್ತು ಕುಲಶೇಖರ ಕಚೇರಿ ಮೇಲೆ ಎಸಿಬಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಪ್ರಕಾಶ್, ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಹಾಗೂ ಕಾರವಾರ ಎಸಿಬಿ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು