8:11 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು‌ ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

16/03/2022, 21:28

ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್‌ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್ಲಿ ದೊರೆತ ಅಕ್ರಮ ಆಸ್ತಿ ವಿವರ ಇಲ್ಲಿದೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ದಯಾಳ್ ಸುಂದರ್ ಅವರು ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಯಾಳ್ ಅವರು

ಕದ್ರಿ ಕಂಬಳ ಬಳಿ ಸ್ವಂತ ಅಪಾರ್ಟ್‌ಮೆಂಟ್ ಹೊಂದಿದ್ದಾರೆ. ಆದರೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಎಸಿಬಿ ದಾಳಿ ವೇಳೆ

ಬೆಂದೂರ್‌ವೆಲ್‌ನ ಬಾಡಿಗೆ ಮನೆಯಲ್ಲಿ 4 ಕೆ.ಜಿ ಬೆಳ್ಳಿ, 300 ಗ್ರಾಂ ಚಿನ್ನ ಹಾಗೂ ನಗದು ಪತ್ತೆಯಾಗಿದೆ. ನಗದು ಮೊತ್ತ ಇನ್ನೂ ದೃಢಪಟ್ಟಿಲ್ಲ.

ಮಂಗಳೂರು ಮತ್ತು ಮೈಸೂರಿನಲ್ಲಿ ಆಸ್ತಿ ಹೊಂದಿದ್ದಾರೆ. ಮೈಸೂರಿನಲ್ಲಿ 2 ಸೈಟ್, ಹುಣಸೂರಿನಲ್ಲಿ ಒಂದು ಸೈಟ್ ಮತ್ತು 2 ಎಕರೆ ಕೃಷಿ ಭೂಮಿಯ ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿದೆ. ಕೋಟ್ಯಂತರ ರೂ. ಮೌಲ್ಯದ ಜಾಗದ ದಾಖಲೆಗಳನ್ನು ಎಸಿಬಿ ತಂಡ ವಶಕ್ಕೆ ಪಡೆದುಕೊಂಡಿದೆ.

ಬಾಡಿಗೆ ಮನೆ,  ಅಪಾರ್ಟ್‌ಮೆಂಟ್ ಮತ್ತು ಕುಲಶೇಖರ ಕಚೇರಿ ಮೇಲೆ ಎಸಿಬಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಪ್ರಕಾಶ್, ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಹಾಗೂ ಕಾರವಾರ ಎಸಿಬಿ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು