1:17 PM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು‌ ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

16/03/2022, 21:28

ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್‌ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್ಲಿ ದೊರೆತ ಅಕ್ರಮ ಆಸ್ತಿ ವಿವರ ಇಲ್ಲಿದೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ದಯಾಳ್ ಸುಂದರ್ ಅವರು ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಯಾಳ್ ಅವರು

ಕದ್ರಿ ಕಂಬಳ ಬಳಿ ಸ್ವಂತ ಅಪಾರ್ಟ್‌ಮೆಂಟ್ ಹೊಂದಿದ್ದಾರೆ. ಆದರೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಎಸಿಬಿ ದಾಳಿ ವೇಳೆ

ಬೆಂದೂರ್‌ವೆಲ್‌ನ ಬಾಡಿಗೆ ಮನೆಯಲ್ಲಿ 4 ಕೆ.ಜಿ ಬೆಳ್ಳಿ, 300 ಗ್ರಾಂ ಚಿನ್ನ ಹಾಗೂ ನಗದು ಪತ್ತೆಯಾಗಿದೆ. ನಗದು ಮೊತ್ತ ಇನ್ನೂ ದೃಢಪಟ್ಟಿಲ್ಲ.

ಮಂಗಳೂರು ಮತ್ತು ಮೈಸೂರಿನಲ್ಲಿ ಆಸ್ತಿ ಹೊಂದಿದ್ದಾರೆ. ಮೈಸೂರಿನಲ್ಲಿ 2 ಸೈಟ್, ಹುಣಸೂರಿನಲ್ಲಿ ಒಂದು ಸೈಟ್ ಮತ್ತು 2 ಎಕರೆ ಕೃಷಿ ಭೂಮಿಯ ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿದೆ. ಕೋಟ್ಯಂತರ ರೂ. ಮೌಲ್ಯದ ಜಾಗದ ದಾಖಲೆಗಳನ್ನು ಎಸಿಬಿ ತಂಡ ವಶಕ್ಕೆ ಪಡೆದುಕೊಂಡಿದೆ.

ಬಾಡಿಗೆ ಮನೆ,  ಅಪಾರ್ಟ್‌ಮೆಂಟ್ ಮತ್ತು ಕುಲಶೇಖರ ಕಚೇರಿ ಮೇಲೆ ಎಸಿಬಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಪ್ರಕಾಶ್, ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಹಾಗೂ ಕಾರವಾರ ಎಸಿಬಿ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು