7:30 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು‌ ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

16/03/2022, 21:28

ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್‌ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್ಲಿ ದೊರೆತ ಅಕ್ರಮ ಆಸ್ತಿ ವಿವರ ಇಲ್ಲಿದೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ದಯಾಳ್ ಸುಂದರ್ ಅವರು ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಯಾಳ್ ಅವರು

ಕದ್ರಿ ಕಂಬಳ ಬಳಿ ಸ್ವಂತ ಅಪಾರ್ಟ್‌ಮೆಂಟ್ ಹೊಂದಿದ್ದಾರೆ. ಆದರೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಎಸಿಬಿ ದಾಳಿ ವೇಳೆ

ಬೆಂದೂರ್‌ವೆಲ್‌ನ ಬಾಡಿಗೆ ಮನೆಯಲ್ಲಿ 4 ಕೆ.ಜಿ ಬೆಳ್ಳಿ, 300 ಗ್ರಾಂ ಚಿನ್ನ ಹಾಗೂ ನಗದು ಪತ್ತೆಯಾಗಿದೆ. ನಗದು ಮೊತ್ತ ಇನ್ನೂ ದೃಢಪಟ್ಟಿಲ್ಲ.

ಮಂಗಳೂರು ಮತ್ತು ಮೈಸೂರಿನಲ್ಲಿ ಆಸ್ತಿ ಹೊಂದಿದ್ದಾರೆ. ಮೈಸೂರಿನಲ್ಲಿ 2 ಸೈಟ್, ಹುಣಸೂರಿನಲ್ಲಿ ಒಂದು ಸೈಟ್ ಮತ್ತು 2 ಎಕರೆ ಕೃಷಿ ಭೂಮಿಯ ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿದೆ. ಕೋಟ್ಯಂತರ ರೂ. ಮೌಲ್ಯದ ಜಾಗದ ದಾಖಲೆಗಳನ್ನು ಎಸಿಬಿ ತಂಡ ವಶಕ್ಕೆ ಪಡೆದುಕೊಂಡಿದೆ.

ಬಾಡಿಗೆ ಮನೆ,  ಅಪಾರ್ಟ್‌ಮೆಂಟ್ ಮತ್ತು ಕುಲಶೇಖರ ಕಚೇರಿ ಮೇಲೆ ಎಸಿಬಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಪ್ರಕಾಶ್, ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಹಾಗೂ ಕಾರವಾರ ಎಸಿಬಿ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು