4:38 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು‌ ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

16/03/2022, 21:28

ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್‌ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್ಲಿ ದೊರೆತ ಅಕ್ರಮ ಆಸ್ತಿ ವಿವರ ಇಲ್ಲಿದೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ದಯಾಳ್ ಸುಂದರ್ ಅವರು ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಯಾಳ್ ಅವರು

ಕದ್ರಿ ಕಂಬಳ ಬಳಿ ಸ್ವಂತ ಅಪಾರ್ಟ್‌ಮೆಂಟ್ ಹೊಂದಿದ್ದಾರೆ. ಆದರೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಎಸಿಬಿ ದಾಳಿ ವೇಳೆ

ಬೆಂದೂರ್‌ವೆಲ್‌ನ ಬಾಡಿಗೆ ಮನೆಯಲ್ಲಿ 4 ಕೆ.ಜಿ ಬೆಳ್ಳಿ, 300 ಗ್ರಾಂ ಚಿನ್ನ ಹಾಗೂ ನಗದು ಪತ್ತೆಯಾಗಿದೆ. ನಗದು ಮೊತ್ತ ಇನ್ನೂ ದೃಢಪಟ್ಟಿಲ್ಲ.

ಮಂಗಳೂರು ಮತ್ತು ಮೈಸೂರಿನಲ್ಲಿ ಆಸ್ತಿ ಹೊಂದಿದ್ದಾರೆ. ಮೈಸೂರಿನಲ್ಲಿ 2 ಸೈಟ್, ಹುಣಸೂರಿನಲ್ಲಿ ಒಂದು ಸೈಟ್ ಮತ್ತು 2 ಎಕರೆ ಕೃಷಿ ಭೂಮಿಯ ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿದೆ. ಕೋಟ್ಯಂತರ ರೂ. ಮೌಲ್ಯದ ಜಾಗದ ದಾಖಲೆಗಳನ್ನು ಎಸಿಬಿ ತಂಡ ವಶಕ್ಕೆ ಪಡೆದುಕೊಂಡಿದೆ.

ಬಾಡಿಗೆ ಮನೆ,  ಅಪಾರ್ಟ್‌ಮೆಂಟ್ ಮತ್ತು ಕುಲಶೇಖರ ಕಚೇರಿ ಮೇಲೆ ಎಸಿಬಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಪ್ರಕಾಶ್, ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಹಾಗೂ ಕಾರವಾರ ಎಸಿಬಿ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು