9:42 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಭೀಕರ ಅಪಘಾತ: ಬಳ್ಳಾರಿಯ ಬಿಮ್ಸ್ ನ ಇಬ್ಬರು ವೈದ್ಯರು ಸೇರಿ 3 ಮಂದಿ ದಾರುಣ ಸಾವು

01/12/2024, 14:33

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ತಾಲೂಕಿನ ಆಂದ್ರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ವಿಡುಪನಕಲ್ಲು- ಚೇಳ್ಳಗುರ್ಕಿ ಮಧ್ಯೆ ಇಂದು ಬೆಳಗಿನ ಜಾವ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಬಳ್ಳಾರಿಯ ಮೂವರು ಸಾವನ್ನಪ್ಪಿ ಮತ್ತೊಬ್ಬರು ಗಾಯಗೊಂಡಿದ್ದಾರೆ.
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಕ್ಯಾನ್ಸರ್ ವೈದ್ಯ ಡಾ.ಗೋವಿಂದರಾಜುಲು, ನೇತ್ರ ತಜ್ಞ ಡಾ.ಯೋಗೀಶ್ ಮತ್ತು ವಕೀಲ ವೆಂಕಟ ನಾಯ್ಡು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಖಾಸಗೀ ವೈದ್ಯ, ಗಂಧರ್ವ ಗಿರಿ ಎಸ್ಟೇಟ್ ಮಾಲೀಕ ಡಾ.ಅಮರೇಗೌಡ ಪಾಟೀಲ್ ಅವರು ಗಾಯಗೊಂಡಿದ್ದಾರೆ.
ಅವರು ನಾಲ್ವರು ಬ್ಯಾಂಕಾಕ್ ಪ್ರವಾಸ ಮುಗಿಸಿಕೊಂಡು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಅನಂತಪುರಂ ಮಾರ್ಗವಾಗಿ ಬಳ್ಳಾರಿಗೆ ಆಗಮಿಸುತ್ತಿದ್ದರು. ಲಾಯರ್ ಮತ್ತು ಪೈನಾನ್ಸರ್ ಆಗಿದ್ದ ವೆಂಕಟ ನಾಯ್ಡು ಅವರು ಅಮರೇಗೌಡ ಅವರ ಪೋರ್ಡ್ ಎಂಡೆವರ ಕಾರನ್ನು ಚಲಾಯಿಸುತ್ತಿದ್ದರು. ನಿದ್ರೆಯ ಮಂಪರಿನಲ್ಲಿ ಚೇಳ್ಳಗುರ್ಕಿ ಇನ್ನು 5 ಕಿಲೋ ಮೀಟರ್ ಇರುವಾಗ ಕಾರು ನಿಯಂತ್ರಣ ತಪ್ಪಿ ಬೆಳಗಿನ ಜಾವ 4 ಗಂಟೆಗೆ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಮರೇಗೌಡ ಅವರ ಐ ಪೋನ್ ಅಪಘಾತದ ಸಂದೇಶ ಕಳಿಸಿದ್ದು ಸಂಬಂಧಿಕರಿಗೆ ತಿಳಿದಿದೆ.

ಅಮರೇಗೌಡ ಅವರಿಗೆ ಬಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರ ಶವಗಳನ್ನು ಬಿಮ್ಸ್ ಆಸ್ಪತ್ರೆಗೆ ತರಲಾಗಿದೆ. ಡಾ.ಗೋವಿಂದರಾಜುಲು ಅವರು ಈ ಭಾಗದಲ್ಲಿ ಕ್ಯಾನ್ಸರ್ ಚಿಕಿತ್ಸೆ ನೀಡುವಲ್ಲಿ ಖ್ಯಾತರಾಗಿದ್ದರು. ಬಡ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಅವರ ಗುಣ ಮೆಚ್ಚುಗೆಯಾಗಿತ್ತು. ಇವರ ಸಾವಿಗೆ ಬಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಮತ್ತು ಸಿಬ್ಬಂದಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು