8:04 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಭೀಕರ ಅಪಘಾತ: ಬಳ್ಳಾರಿಯ ಬಿಮ್ಸ್ ನ ಇಬ್ಬರು ವೈದ್ಯರು ಸೇರಿ 3 ಮಂದಿ ದಾರುಣ ಸಾವು

01/12/2024, 14:33

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ತಾಲೂಕಿನ ಆಂದ್ರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ವಿಡುಪನಕಲ್ಲು- ಚೇಳ್ಳಗುರ್ಕಿ ಮಧ್ಯೆ ಇಂದು ಬೆಳಗಿನ ಜಾವ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಬಳ್ಳಾರಿಯ ಮೂವರು ಸಾವನ್ನಪ್ಪಿ ಮತ್ತೊಬ್ಬರು ಗಾಯಗೊಂಡಿದ್ದಾರೆ.
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಕ್ಯಾನ್ಸರ್ ವೈದ್ಯ ಡಾ.ಗೋವಿಂದರಾಜುಲು, ನೇತ್ರ ತಜ್ಞ ಡಾ.ಯೋಗೀಶ್ ಮತ್ತು ವಕೀಲ ವೆಂಕಟ ನಾಯ್ಡು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಖಾಸಗೀ ವೈದ್ಯ, ಗಂಧರ್ವ ಗಿರಿ ಎಸ್ಟೇಟ್ ಮಾಲೀಕ ಡಾ.ಅಮರೇಗೌಡ ಪಾಟೀಲ್ ಅವರು ಗಾಯಗೊಂಡಿದ್ದಾರೆ.
ಅವರು ನಾಲ್ವರು ಬ್ಯಾಂಕಾಕ್ ಪ್ರವಾಸ ಮುಗಿಸಿಕೊಂಡು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಅನಂತಪುರಂ ಮಾರ್ಗವಾಗಿ ಬಳ್ಳಾರಿಗೆ ಆಗಮಿಸುತ್ತಿದ್ದರು. ಲಾಯರ್ ಮತ್ತು ಪೈನಾನ್ಸರ್ ಆಗಿದ್ದ ವೆಂಕಟ ನಾಯ್ಡು ಅವರು ಅಮರೇಗೌಡ ಅವರ ಪೋರ್ಡ್ ಎಂಡೆವರ ಕಾರನ್ನು ಚಲಾಯಿಸುತ್ತಿದ್ದರು. ನಿದ್ರೆಯ ಮಂಪರಿನಲ್ಲಿ ಚೇಳ್ಳಗುರ್ಕಿ ಇನ್ನು 5 ಕಿಲೋ ಮೀಟರ್ ಇರುವಾಗ ಕಾರು ನಿಯಂತ್ರಣ ತಪ್ಪಿ ಬೆಳಗಿನ ಜಾವ 4 ಗಂಟೆಗೆ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಮರೇಗೌಡ ಅವರ ಐ ಪೋನ್ ಅಪಘಾತದ ಸಂದೇಶ ಕಳಿಸಿದ್ದು ಸಂಬಂಧಿಕರಿಗೆ ತಿಳಿದಿದೆ.

ಅಮರೇಗೌಡ ಅವರಿಗೆ ಬಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರ ಶವಗಳನ್ನು ಬಿಮ್ಸ್ ಆಸ್ಪತ್ರೆಗೆ ತರಲಾಗಿದೆ. ಡಾ.ಗೋವಿಂದರಾಜುಲು ಅವರು ಈ ಭಾಗದಲ್ಲಿ ಕ್ಯಾನ್ಸರ್ ಚಿಕಿತ್ಸೆ ನೀಡುವಲ್ಲಿ ಖ್ಯಾತರಾಗಿದ್ದರು. ಬಡ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಅವರ ಗುಣ ಮೆಚ್ಚುಗೆಯಾಗಿತ್ತು. ಇವರ ಸಾವಿಗೆ ಬಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಮತ್ತು ಸಿಬ್ಬಂದಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು