7:03 AM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ಭೀಕರ ಅಪಘಾತ: ಬಳ್ಳಾರಿಯ ಬಿಮ್ಸ್ ನ ಇಬ್ಬರು ವೈದ್ಯರು ಸೇರಿ 3 ಮಂದಿ ದಾರುಣ ಸಾವು

01/12/2024, 14:33

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ತಾಲೂಕಿನ ಆಂದ್ರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ವಿಡುಪನಕಲ್ಲು- ಚೇಳ್ಳಗುರ್ಕಿ ಮಧ್ಯೆ ಇಂದು ಬೆಳಗಿನ ಜಾವ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಬಳ್ಳಾರಿಯ ಮೂವರು ಸಾವನ್ನಪ್ಪಿ ಮತ್ತೊಬ್ಬರು ಗಾಯಗೊಂಡಿದ್ದಾರೆ.
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಕ್ಯಾನ್ಸರ್ ವೈದ್ಯ ಡಾ.ಗೋವಿಂದರಾಜುಲು, ನೇತ್ರ ತಜ್ಞ ಡಾ.ಯೋಗೀಶ್ ಮತ್ತು ವಕೀಲ ವೆಂಕಟ ನಾಯ್ಡು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಖಾಸಗೀ ವೈದ್ಯ, ಗಂಧರ್ವ ಗಿರಿ ಎಸ್ಟೇಟ್ ಮಾಲೀಕ ಡಾ.ಅಮರೇಗೌಡ ಪಾಟೀಲ್ ಅವರು ಗಾಯಗೊಂಡಿದ್ದಾರೆ.
ಅವರು ನಾಲ್ವರು ಬ್ಯಾಂಕಾಕ್ ಪ್ರವಾಸ ಮುಗಿಸಿಕೊಂಡು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಅನಂತಪುರಂ ಮಾರ್ಗವಾಗಿ ಬಳ್ಳಾರಿಗೆ ಆಗಮಿಸುತ್ತಿದ್ದರು. ಲಾಯರ್ ಮತ್ತು ಪೈನಾನ್ಸರ್ ಆಗಿದ್ದ ವೆಂಕಟ ನಾಯ್ಡು ಅವರು ಅಮರೇಗೌಡ ಅವರ ಪೋರ್ಡ್ ಎಂಡೆವರ ಕಾರನ್ನು ಚಲಾಯಿಸುತ್ತಿದ್ದರು. ನಿದ್ರೆಯ ಮಂಪರಿನಲ್ಲಿ ಚೇಳ್ಳಗುರ್ಕಿ ಇನ್ನು 5 ಕಿಲೋ ಮೀಟರ್ ಇರುವಾಗ ಕಾರು ನಿಯಂತ್ರಣ ತಪ್ಪಿ ಬೆಳಗಿನ ಜಾವ 4 ಗಂಟೆಗೆ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಮರೇಗೌಡ ಅವರ ಐ ಪೋನ್ ಅಪಘಾತದ ಸಂದೇಶ ಕಳಿಸಿದ್ದು ಸಂಬಂಧಿಕರಿಗೆ ತಿಳಿದಿದೆ.

ಅಮರೇಗೌಡ ಅವರಿಗೆ ಬಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರ ಶವಗಳನ್ನು ಬಿಮ್ಸ್ ಆಸ್ಪತ್ರೆಗೆ ತರಲಾಗಿದೆ. ಡಾ.ಗೋವಿಂದರಾಜುಲು ಅವರು ಈ ಭಾಗದಲ್ಲಿ ಕ್ಯಾನ್ಸರ್ ಚಿಕಿತ್ಸೆ ನೀಡುವಲ್ಲಿ ಖ್ಯಾತರಾಗಿದ್ದರು. ಬಡ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಅವರ ಗುಣ ಮೆಚ್ಚುಗೆಯಾಗಿತ್ತು. ಇವರ ಸಾವಿಗೆ ಬಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಮತ್ತು ಸಿಬ್ಬಂದಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು