11:01 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಾಯಿ ಅಡ್ಡ ಬಂದು ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು; ಶ್ವಾನ ಕೂಡ ಬಲಿ

01/11/2024, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೈಕಿಗೆ ಬೀದಿನಾಯಿ ಅಡ್ಡಬಂದು ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪಟ್ಟಣದಲ್ಲಿ ನಡೆದಿದೆ.
ಮೃತ ಯುವಕ ಗೋಣಿಬೀಡು ಸಮೀಪದ ಆನೆದಿಬ್ಬ ನಿವಾಸಿ ಜಾಫರ್ (24) ಎಂದು ಗುರುತಿಸಲಾಗಿದೆ.
ಆನೆದಿಬ್ಬ ಗ್ರಾಮದ ಇಸಾಕ್ ಎಂಬುವವರ ಪುತ್ರ ಜಾಫರ್ ಶುಕ್ರವಾರ ಬೆಳಿಗ್ಗೆ ಸಮೀಪದ ಬೆಟ್ಟದಮನೆಯ ಗ್ರಾಮದಲ್ಲಿ ತಾನು ಕೆಲಸ ಮಾಡಿದ್ದ ಹಣವನ್ನು ಪಡೆಯಲು ಹೋಗಿದ್ದರು ಎನ್ನಲಾಗಿದೆ. ಬೆಟ್ಟದಮನೆಯಿಂದ ವಾಪಾಸಾಗುತ್ತಿದ್ದ ವೇಳೆ ಗೋಣಿಬೀಡು ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿಯೊಂದು ಬೈಕಿಗೆ ಅಡ್ಡಬಂದಿದ್ದು, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಮಗುಚಿದೆ. ಈ ಸಂದರ್ಭ ಚರಂಡಿಗೆ ಅಳವಡಿಸಿದ್ದ ಸಿಮೆಂಟ್ ಚಪ್ಪಡಿಗಳಿಗೆ ಜಾಫರ್ ತಲೆ ಹೊಡೆದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಾಯಿಯೂ ಕೂಡ ಸ್ಥಳದಲ್ಲೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ನೇಹಜೀವಿಯಾಗಿದ್ದ ಜಾಫರ್ ನಿಧನಕ್ಕೆ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು