12:01 PM Friday12 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಚಾಲಕನ ಅತಿ ವೇಗ: ರಸ್ತೆ ಡಿವೈಡರ್ ಗೆ ನುಗ್ಗಿದ ಖಾಸಗಿ ಮಿನಿ ಬಸ್; ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡ ಅಯ್ಯಪ್ಪ ಸ್ವಾಮಿ ಭಕ್ತರು

21/09/2024, 10:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹೊರ ರಾಜ್ಯ ಕೇರಳದಿಂದ ಅಯ್ಯಪ್ಪ ಸ್ವಾಮಿ ದರ್ಶನವನ್ನು ಪಡೆದುಕೊಂಡು ಊಟಿ ರಸ್ತೆಯ ಮಾರ್ಗವಾಗಿ ಮೈಸೂರು ಕಡೆ ಬರುತ್ತಿದ್ದ ಮಿನಿ ಬಸ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡಿರುವ ಘಟನೆ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಬೆಂಗಳೂರು ಕಾಮಾಕ್ಷಿಪಾಳ್ಯ ಬೊಮ್ಮಸಂದ್ರ ಮೂಲದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ದರ್ಶನ ಮಾಡುವ ಸಲುವಾಗಿ ಕೆ ಎ 51 ಬಿ 5616 ನಂಬರಿನ ಖಾಸಗಿ ಮಿನಿ ಬಸ್ ನಲ್ಲಿ ಕೇರಳಕ್ಕೆ ತೆರಳಿದ್ದಾರೆ.


ಸುಲಲಿತವಾಗಿ ದರ್ಶನ ಪಡೆದುಕೊಂಡು ಮರಳುತ್ತಿರುವಾಗ ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ ಮಿನಿ ಬಸ್ ಚಾಲಕನ ಅತಿ ವೇಗ ಮತ್ತು ನಿದ್ರೆಗೆ ಜಾರಿದ ಪರಿಣಾಮ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿ ಕೊಂಡಿದ್ದಾರೆ‌ ಸಣ್ಣಪುಟ್ಟ ಗಾಯಗಳಾಗಿರುವ ಇವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ನಂಜನಗೂಡು ಸಂಚಾರಿ ಪೊಲೀಸರು ಘಟನೆ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ.
ಮಿನಿ ಬಸ್ ಅಪಘಾತದಿಂದ ಬಿಡಿ ಭಾಗಗಳು ಛಿದ್ರ ವಾಗಿರುವ ದೃಶ್ಯ ನೋಡಿದ ಸಾರ್ವಜನಿಕರು ಬಸ್ಸಿನಲ್ಲಿ ಚಲಿಸುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪುನರ್ಜನ್ಮ ಎನ್ನುತ್ತಿದ್ದಾರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು