7:02 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಚಾಲಕನ ಅತಿ ವೇಗ: ರಸ್ತೆ ಡಿವೈಡರ್ ಗೆ ನುಗ್ಗಿದ ಖಾಸಗಿ ಮಿನಿ ಬಸ್; ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡ ಅಯ್ಯಪ್ಪ ಸ್ವಾಮಿ ಭಕ್ತರು

21/09/2024, 10:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹೊರ ರಾಜ್ಯ ಕೇರಳದಿಂದ ಅಯ್ಯಪ್ಪ ಸ್ವಾಮಿ ದರ್ಶನವನ್ನು ಪಡೆದುಕೊಂಡು ಊಟಿ ರಸ್ತೆಯ ಮಾರ್ಗವಾಗಿ ಮೈಸೂರು ಕಡೆ ಬರುತ್ತಿದ್ದ ಮಿನಿ ಬಸ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡಿರುವ ಘಟನೆ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಬೆಂಗಳೂರು ಕಾಮಾಕ್ಷಿಪಾಳ್ಯ ಬೊಮ್ಮಸಂದ್ರ ಮೂಲದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ದರ್ಶನ ಮಾಡುವ ಸಲುವಾಗಿ ಕೆ ಎ 51 ಬಿ 5616 ನಂಬರಿನ ಖಾಸಗಿ ಮಿನಿ ಬಸ್ ನಲ್ಲಿ ಕೇರಳಕ್ಕೆ ತೆರಳಿದ್ದಾರೆ.


ಸುಲಲಿತವಾಗಿ ದರ್ಶನ ಪಡೆದುಕೊಂಡು ಮರಳುತ್ತಿರುವಾಗ ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ ಮಿನಿ ಬಸ್ ಚಾಲಕನ ಅತಿ ವೇಗ ಮತ್ತು ನಿದ್ರೆಗೆ ಜಾರಿದ ಪರಿಣಾಮ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿ ಕೊಂಡಿದ್ದಾರೆ‌ ಸಣ್ಣಪುಟ್ಟ ಗಾಯಗಳಾಗಿರುವ ಇವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ನಂಜನಗೂಡು ಸಂಚಾರಿ ಪೊಲೀಸರು ಘಟನೆ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ.
ಮಿನಿ ಬಸ್ ಅಪಘಾತದಿಂದ ಬಿಡಿ ಭಾಗಗಳು ಛಿದ್ರ ವಾಗಿರುವ ದೃಶ್ಯ ನೋಡಿದ ಸಾರ್ವಜನಿಕರು ಬಸ್ಸಿನಲ್ಲಿ ಚಲಿಸುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪುನರ್ಜನ್ಮ ಎನ್ನುತ್ತಿದ್ದಾರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು