8:18 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಚಾಲಕನ ಅತಿ ವೇಗ: ರಸ್ತೆ ಡಿವೈಡರ್ ಗೆ ನುಗ್ಗಿದ ಖಾಸಗಿ ಮಿನಿ ಬಸ್; ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡ ಅಯ್ಯಪ್ಪ ಸ್ವಾಮಿ ಭಕ್ತರು

21/09/2024, 10:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹೊರ ರಾಜ್ಯ ಕೇರಳದಿಂದ ಅಯ್ಯಪ್ಪ ಸ್ವಾಮಿ ದರ್ಶನವನ್ನು ಪಡೆದುಕೊಂಡು ಊಟಿ ರಸ್ತೆಯ ಮಾರ್ಗವಾಗಿ ಮೈಸೂರು ಕಡೆ ಬರುತ್ತಿದ್ದ ಮಿನಿ ಬಸ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡಿರುವ ಘಟನೆ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಬೆಂಗಳೂರು ಕಾಮಾಕ್ಷಿಪಾಳ್ಯ ಬೊಮ್ಮಸಂದ್ರ ಮೂಲದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ದರ್ಶನ ಮಾಡುವ ಸಲುವಾಗಿ ಕೆ ಎ 51 ಬಿ 5616 ನಂಬರಿನ ಖಾಸಗಿ ಮಿನಿ ಬಸ್ ನಲ್ಲಿ ಕೇರಳಕ್ಕೆ ತೆರಳಿದ್ದಾರೆ.


ಸುಲಲಿತವಾಗಿ ದರ್ಶನ ಪಡೆದುಕೊಂಡು ಮರಳುತ್ತಿರುವಾಗ ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ ಮಿನಿ ಬಸ್ ಚಾಲಕನ ಅತಿ ವೇಗ ಮತ್ತು ನಿದ್ರೆಗೆ ಜಾರಿದ ಪರಿಣಾಮ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿ ಕೊಂಡಿದ್ದಾರೆ‌ ಸಣ್ಣಪುಟ್ಟ ಗಾಯಗಳಾಗಿರುವ ಇವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ನಂಜನಗೂಡು ಸಂಚಾರಿ ಪೊಲೀಸರು ಘಟನೆ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ.
ಮಿನಿ ಬಸ್ ಅಪಘಾತದಿಂದ ಬಿಡಿ ಭಾಗಗಳು ಛಿದ್ರ ವಾಗಿರುವ ದೃಶ್ಯ ನೋಡಿದ ಸಾರ್ವಜನಿಕರು ಬಸ್ಸಿನಲ್ಲಿ ಚಲಿಸುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪುನರ್ಜನ್ಮ ಎನ್ನುತ್ತಿದ್ದಾರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು