2:21 AM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಚಾಲಕನ ಅತಿ ವೇಗ: ರಸ್ತೆ ಡಿವೈಡರ್ ಗೆ ನುಗ್ಗಿದ ಖಾಸಗಿ ಮಿನಿ ಬಸ್; ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡ ಅಯ್ಯಪ್ಪ ಸ್ವಾಮಿ ಭಕ್ತರು

21/09/2024, 10:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹೊರ ರಾಜ್ಯ ಕೇರಳದಿಂದ ಅಯ್ಯಪ್ಪ ಸ್ವಾಮಿ ದರ್ಶನವನ್ನು ಪಡೆದುಕೊಂಡು ಊಟಿ ರಸ್ತೆಯ ಮಾರ್ಗವಾಗಿ ಮೈಸೂರು ಕಡೆ ಬರುತ್ತಿದ್ದ ಮಿನಿ ಬಸ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡಿರುವ ಘಟನೆ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಬೆಂಗಳೂರು ಕಾಮಾಕ್ಷಿಪಾಳ್ಯ ಬೊಮ್ಮಸಂದ್ರ ಮೂಲದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ದರ್ಶನ ಮಾಡುವ ಸಲುವಾಗಿ ಕೆ ಎ 51 ಬಿ 5616 ನಂಬರಿನ ಖಾಸಗಿ ಮಿನಿ ಬಸ್ ನಲ್ಲಿ ಕೇರಳಕ್ಕೆ ತೆರಳಿದ್ದಾರೆ.


ಸುಲಲಿತವಾಗಿ ದರ್ಶನ ಪಡೆದುಕೊಂಡು ಮರಳುತ್ತಿರುವಾಗ ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ ಮಿನಿ ಬಸ್ ಚಾಲಕನ ಅತಿ ವೇಗ ಮತ್ತು ನಿದ್ರೆಗೆ ಜಾರಿದ ಪರಿಣಾಮ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿ ಕೊಂಡಿದ್ದಾರೆ‌ ಸಣ್ಣಪುಟ್ಟ ಗಾಯಗಳಾಗಿರುವ ಇವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ನಂಜನಗೂಡು ಸಂಚಾರಿ ಪೊಲೀಸರು ಘಟನೆ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ.
ಮಿನಿ ಬಸ್ ಅಪಘಾತದಿಂದ ಬಿಡಿ ಭಾಗಗಳು ಛಿದ್ರ ವಾಗಿರುವ ದೃಶ್ಯ ನೋಡಿದ ಸಾರ್ವಜನಿಕರು ಬಸ್ಸಿನಲ್ಲಿ ಚಲಿಸುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪುನರ್ಜನ್ಮ ಎನ್ನುತ್ತಿದ್ದಾರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು