ಇತ್ತೀಚಿನ ಸುದ್ದಿ
Accident | ಪುತ್ತೂರು ಸಮೀಪದ ಮುರದಲ್ಲಿ ಕಾರಿಗೆ ಗುದ್ದಿದ ಖಾಸಗಿ ಬಸ್: 3 ಮಂದಿ ಗಂಭೀರ
27/05/2025, 16:48

ಜಯಾನಂದ ಪೆರಾಜೆ ಬಂಟ್ವಾಳ
info.reporterkarnataka@gmail.com
ರಾಷ್ಟ್ರೀಯ ಹೆದ್ದಾರಿ ಪುತ್ತೂರು ಸಮೀಪದ ನೆಹರು ನಗರ ಸಮೀಪ ಮುರ ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ರಸ್ತೆ
ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದು ಬಸ್ಸು ಗುದ್ದಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಆಗಮಿಸಿ ಪುತ್ತೂರು ಸಂಚಾರಿ ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ.