4:44 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28 ಮಂದಿಗೆ ಗಾಯ

02/07/2025, 21:56

ಸುರತ್ಕಲ್(reporterkarnataka.com): ಮಂಗಳೂರು ನಗರದ ಸುರತ್ಕಲ್ ಸಮೀಪದ ಮಧ್ಯ ವಾಲ್ಮೀಕಿ ವಸತಿ ಶಾಲೆ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೈಸ್ಕೂಲ್, ಪಿಯುಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿಯರು ಸೇರಿ 28 ಮಂದಿ ಗಾಯಗೊಂಡಿದ್ದಾರೆ.
ಬೆಳಿಗ್ಗೆ 9 ಗಂಟೆ ಸುಮಾರಿಗೆ ಎರಡು ಖಾಸಗಿ ಬಸ್ಸುಗಳು ಪರಸ್ಪರ ಡಿಕ್ಕಿ ಹೊಡೆದವು. ಘಟನೆಯ ದೃಶ್ಯ ಒಂದು ಬಸ್ಸಿನ ಡ್ಯಾಶ್‌ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಯಿಂದ ಚೇಳಾಯರಿಗೆ ಹೊರಟಿದ್ದ ‘ನಂದನ್’ ಬಸ್ಸು ಬಂದು ಎದುರಿನಿಂದ ಬಂದ ಇತರ ಬಸ್ಸಿಗೆ ಢಿಕ್ಕಿಯಾಗಿ ಅಪಘಾತ ಉಂಟಾಗಿದೆ. ಬಸ್ಸುಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅದೃಷ್ಟವಶಾತ್ ಇಬ್ಬರೂ ಬಸ್ಸುಗಳ ಚಾಲಕರು ಗಂಭೀರ ಗಾಯಗಳಿಲ್ಲದೇ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಶಾಜಿ ಮತ್ತು ಮುಹಮ್ಮದ್ ಮುರ್ಶಿದ್ ಎಂಬ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಇಲೆಕ್ಟ್’ ಬಸ್ಸು ಚೇಳಾರಿನಿಂದ ಬಜಪೆ ಕಡೆಗೆ ತೆರಳುತ್ತಿತ್ತು. ಎರಡೂ ಬಸ್ಸುಗಳಲ್ಲೂ ಸುಮಾರು 30ರಷ್ಟು ಪ್ರಯಾಣಿಕರು ಇದ್ದರು.



ಅಪಘಾತಕ್ಕೆ ಒಂದು ಬಸ್ಸಿನ ಸ್ಟೀರಿಂಗ್ ಜಾಮ್ ಆಗಿದ್ದು ಕಾರಣವಾಗಿರಬಹುದು ಎಂದು ಚಾಲಕರು ತಿಳಿಸಿದ್ದಾರೆ. ಘಟನೆಯಲ್ಲಿ 11 ವಿದ್ಯಾರ್ಥಿಗಳು, 5 ಶಿಕ್ಷಕಿಯರು ಸೇರಿ ಒಟ್ಟು 28 ಮಂದಿ ಗಾಯಗೊಂಡಿದ್ದಾರೆ. 2-3 ಮಂದಿಗೆ ಮುಖದ ಭಾಗದಲ್ಲಿ ಗಂಭೀರ ಗಾಯವಾಗಿದೆ. ಒಂದು ಮಗುವಿಗೆ ತೀವ್ರವಾಗಿ ಗಾಯವಾಗಿದೆ ಎಂದು ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಘಟನೆಯ ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ಅಸ್ತವ್ಯಸ್ತ ಸ್ಥಿತಿ ನಿರ್ಮಾಣವಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು