8:04 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತಲಪಾಡಿ ದೇಗುಲ ಹೆಸರಲ್ಲಿ ಅನಧಿಕೃತ ನಿಧಿ ಸಂಗ್ರಹಿಸಿ ಸಾರ್ವಜನಿಕ ಚಂಡಿಕಾ ಯಾಗ ಆರೋಪ: ಕ್ರಮಕ್ಕೆ ಆಗ್ರಹ

21/11/2025, 21:04

ಮಂಗಳೂರು(reporterkarnataka.com): ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇಗುಲ ಹೆಸರಲ್ಲಿ ಅನಧಿಕೃತ ನಿಧಿ ಸಂಗ್ರಹಿಸಿ ಸಾರ್ವಜನಿಕ ಚಂಡಿಕಾ ಯಾಗ ನಡೆಸುತ್ತಿರುವುದಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ.
ದೇವಸ್ಥಾನದಲ್ಲಿ ನ. 23ರಂದು ದೇವಸ್ಥಾನದಲ್ಲಿ ಶಿವಳ್ಳಿ ಸಭಾ ಎನ್ನುವ ಸಂಘವು “ ಸಾರ್ವಜನಿಕ ಚಂಡಿಕಾ ಯಾಗ” ಆಯೋಜಿಸಿದೆ.
ತಲಪಾಡಿ ಕ್ಷೇತ್ರದ ವತಿಯಿಂದ ಈಗಾಗಲೇ ಚಾಲ್ತಿಯಲ್ಲಿರುವ ಸಾಂಪ್ರಾದಾಯಿಕವಾಗಿರುವ ಈ “ ಚಂಡಿಕಾ ಯಾಗ “ ಸೇವಯನ್ನು ದೇವಸ್ಥಾನದ ಮತ್ತು ದೇವರ ಕಾರಣೀಕ ಸಾನಿಧ್ಯ ಉಲ್ಲೇಖಿಸಿಕೊಂಡು ಖಾಸಗಿ ಸಂಘ ಒಂದು ಸ್ವ ಲಾಭಕ್ಕೆ ಬಳಸಿಕೊಂಡು ಊರ ಪರವೂರಿನ, ಕ್ಷೇತ್ರದ ಯಾ ಸಾರ್ವಜಿನಿಕ ಭಕ್ತರಿಂದ ದೇಣಿಗೆಯನ್ನು ಸಂಗ್ರಹಿಸುವ ಪಿತೂರಿ ನಡೆದಿರುವುದು ಮೇಲ್ನೋಟಕ್ಕೆ ಕರಪತ್ರ ಹಾಗೂ ಇತರ ಬಿತ್ತಿ ಪತ್ರದಿಂದ ಕಂಡು ಬಂದಿದೆ. ಇದಕ್ಕಾಗಿ ಕರಪತ್ರಗಳನ್ನು ಮುದ್ರಿಸಿ ದೇವಸ್ಥಾನದ ಅರ್ಚಕರನ್ನೂ ಮತ್ತು ಆಡಳಿತ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರನ್ನು ಯಾಮಾರಿಸಿ ಕ್ಷೇತ್ರದ ಪರಿಸರದಲ್ಲಿ ಕಟೌಟ್ಗಳನ್ನು ಹಾಕಲಾಗಿದೆ. ಹಣ ಸಂಗ್ರಹಣೆಗಾಗಿ “ಶಿವಳ್ಳಿ ಸಭಾ” ಎನ್ನುವ ಹೆಸರಿನಲ್ಲಿ ಬ್ಯಾಂಕಿನ ಕ್ಯೂಆರ್ ಕೋಡ್ ನೀಡಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಖಾಸಗಿಯಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಇಲ್ಲ. ಇಂತಹ ಸಂಘದ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಜರುಗಿಸುವಂತೆ ರಘುರಾಮ್ ರಾವ್ ಕೆ. ದೂರು ನೀಡಿದ್ದಾರೆ.
ಯಾಗಕ್ಕೆ ದೇಣಿಗೆ ಸಂಗ್ರಹಿಸಿ ಉಳಿಕೆಯ ಲಕ್ಷಾಂತರ ಹಣವನ್ನು ಖಾಸಗಿಯವರು ಸ್ವಂತಕ್ಕೆ ಉಪಯೋಗಿಸಿಕೊಳ್ಳುವ ಸಾಧ್ಯತೆಯಿದ್ದು, ಉಳಿಕೆ ಹಣವನ್ನು ದೇವಸ್ಥಾನದ ನಿಧಿಗೆ ಬಳಸಿಕೊಳ್ಳ ಬೇಕು ಎಂದು ಮನವಿ ಮಾಡಿದ್ದಾರೆ.
ತಲಪಾಡಿ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿಯು ಅಸ್ತಿತ್ವವಿಲ್ಲದ ಕಾರಣ ನೇರವಾಗಿ ಆಡಳಿತ ಅಧಿಕಾರಿಗಳ ನೇರ ಸುಪರ್ದಿಯಲ್ಲಿದೆ. ಹೀಗಾಗಿ ಆಡಳಿತಾಧಿಕಾರಿಗೂ ದೂರು ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು