1:12 PM Monday20 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ…

ಇತ್ತೀಚಿನ ಸುದ್ದಿ

ತಲಪಾಡಿ ದೇಗುಲ ಹೆಸರಲ್ಲಿ ಅನಧಿಕೃತ ನಿಧಿ ಸಂಗ್ರಹಿಸಿ ಸಾರ್ವಜನಿಕ ಚಂಡಿಕಾ ಯಾಗ ಆರೋಪ: ಕ್ರಮಕ್ಕೆ ಆಗ್ರಹ

21/11/2025, 21:04

ಮಂಗಳೂರು(reporterkarnataka.com): ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇಗುಲ ಹೆಸರಲ್ಲಿ ಅನಧಿಕೃತ ನಿಧಿ ಸಂಗ್ರಹಿಸಿ ಸಾರ್ವಜನಿಕ ಚಂಡಿಕಾ ಯಾಗ ನಡೆಸುತ್ತಿರುವುದಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ.
ದೇವಸ್ಥಾನದಲ್ಲಿ ನ. 23ರಂದು ದೇವಸ್ಥಾನದಲ್ಲಿ ಶಿವಳ್ಳಿ ಸಭಾ ಎನ್ನುವ ಸಂಘವು “ ಸಾರ್ವಜನಿಕ ಚಂಡಿಕಾ ಯಾಗ” ಆಯೋಜಿಸಿದೆ.
ತಲಪಾಡಿ ಕ್ಷೇತ್ರದ ವತಿಯಿಂದ ಈಗಾಗಲೇ ಚಾಲ್ತಿಯಲ್ಲಿರುವ ಸಾಂಪ್ರಾದಾಯಿಕವಾಗಿರುವ ಈ “ ಚಂಡಿಕಾ ಯಾಗ “ ಸೇವಯನ್ನು ದೇವಸ್ಥಾನದ ಮತ್ತು ದೇವರ ಕಾರಣೀಕ ಸಾನಿಧ್ಯ ಉಲ್ಲೇಖಿಸಿಕೊಂಡು ಖಾಸಗಿ ಸಂಘ ಒಂದು ಸ್ವ ಲಾಭಕ್ಕೆ ಬಳಸಿಕೊಂಡು ಊರ ಪರವೂರಿನ, ಕ್ಷೇತ್ರದ ಯಾ ಸಾರ್ವಜಿನಿಕ ಭಕ್ತರಿಂದ ದೇಣಿಗೆಯನ್ನು ಸಂಗ್ರಹಿಸುವ ಪಿತೂರಿ ನಡೆದಿರುವುದು ಮೇಲ್ನೋಟಕ್ಕೆ ಕರಪತ್ರ ಹಾಗೂ ಇತರ ಬಿತ್ತಿ ಪತ್ರದಿಂದ ಕಂಡು ಬಂದಿದೆ. ಇದಕ್ಕಾಗಿ ಕರಪತ್ರಗಳನ್ನು ಮುದ್ರಿಸಿ ದೇವಸ್ಥಾನದ ಅರ್ಚಕರನ್ನೂ ಮತ್ತು ಆಡಳಿತ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರನ್ನು ಯಾಮಾರಿಸಿ ಕ್ಷೇತ್ರದ ಪರಿಸರದಲ್ಲಿ ಕಟೌಟ್ಗಳನ್ನು ಹಾಕಲಾಗಿದೆ. ಹಣ ಸಂಗ್ರಹಣೆಗಾಗಿ “ಶಿವಳ್ಳಿ ಸಭಾ” ಎನ್ನುವ ಹೆಸರಿನಲ್ಲಿ ಬ್ಯಾಂಕಿನ ಕ್ಯೂಆರ್ ಕೋಡ್ ನೀಡಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಖಾಸಗಿಯಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಇಲ್ಲ. ಇಂತಹ ಸಂಘದ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಜರುಗಿಸುವಂತೆ ರಘುರಾಮ್ ರಾವ್ ಕೆ. ದೂರು ನೀಡಿದ್ದಾರೆ.
ಯಾಗಕ್ಕೆ ದೇಣಿಗೆ ಸಂಗ್ರಹಿಸಿ ಉಳಿಕೆಯ ಲಕ್ಷಾಂತರ ಹಣವನ್ನು ಖಾಸಗಿಯವರು ಸ್ವಂತಕ್ಕೆ ಉಪಯೋಗಿಸಿಕೊಳ್ಳುವ ಸಾಧ್ಯತೆಯಿದ್ದು, ಉಳಿಕೆ ಹಣವನ್ನು ದೇವಸ್ಥಾನದ ನಿಧಿಗೆ ಬಳಸಿಕೊಳ್ಳ ಬೇಕು ಎಂದು ಮನವಿ ಮಾಡಿದ್ದಾರೆ.
ತಲಪಾಡಿ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿಯು ಅಸ್ತಿತ್ವವಿಲ್ಲದ ಕಾರಣ ನೇರವಾಗಿ ಆಡಳಿತ ಅಧಿಕಾರಿಗಳ ನೇರ ಸುಪರ್ದಿಯಲ್ಲಿದೆ. ಹೀಗಾಗಿ ಆಡಳಿತಾಧಿಕಾರಿಗೂ ದೂರು ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು