12:34 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ

18/06/2025, 10:43

•ನಾಲ್ಕು ಮಹಾನಗರ ಪಾಲಿಕೆಗಳಿಗೆ ಒಂದು ದಿನದ ಗಡುವು ನೀಡಿದ ಸಚಿವರು

ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚನೆ

ಬೆಂಗಳೂರು(reporterkarnataka.com): ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಯೋಜನೆ ಕುರಿತು ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಹೊರತುಪಡಿಸಿ ಎಲ್ಲಾ ಮಹಾನಗರ ಪಾಲಿಕೆಗಳ ಆಯುಕ್ತರ ಸಭೆಯಲ್ಲಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಸರ್ಕಾರ ಸೂಕ್ತ ಅನುದಾನವನ್ನು ಬಿಡುಗಡೆ ಮಾಡಿದ್ದರೂ ಅದಕ್ಕೆ ಪೂರಕವಾಗಿ ಕಾರ್ಯಯೋಜನೆ ಸಿದ್ಧಪಡಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣ, ರಸ್ತೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಎರಡನೇ ಹಂತದಲ್ಲಿ ಎಲ್ಲಾ 11 ಮಹಾನಗರ ಪಾಲಿಕೆಗಳಿಗೆ ಒಟ್ಟು 1730 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
ಮೈಸೂರು, ವಿಜಯಪುರ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಮಂಗಳೂರು ಮತ್ತು ರಾಯಚೂರು ಮಹಾ ನಗರಪಾಲಿಕೆಗಳು ತಮಗೆ ನಿಗದಿಪಡಿಸಲಾದ ಅನುದಾನಕ್ಕೆ ಪೂರಕವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಯೋಜನೆಗಳನ್ನು ಸಿದ್ಧಪಡಿಸಿವೆ. ಆದರೆ, ಕಲಬುರಗಿ, ತುಮಕೂರು, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳು ಇದುವರೆಗೂ ಕಾರ್ಯಯೋಜನೆ ವರದಿಯನ್ನು ಪೂರ್ಣಗೊಳಿಸಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಒಂದು ದಿನದ ಗಡುವು
ಬುಧವಾರ ಸಂಜೆಯೊಳಗೆ ಕಾರ್ಯಯೋಜನೆಯನ್ನು ಸಿದ್ಧಪಡಿಸಬೇಕು. ಈ ಗಡುವಿನೊಳಗೆ ವರದಿಯನ್ನು ಸಿದ್ಧಪಡಿಸದಿದ್ದರೆ ಅಂತಹ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಯಾವ್ಯಾವ ಪಾಲಿಕೆಗಳಿಗೆ ಎಷ್ಟೆಷ್ಟು ಅನುದಾನ?
ಮೈಸೂರು ಮಹಾ ನಗರ ಪಾಲಿಕೆಗೆ 250 ಕೋಟಿ ರೂಪಾಯಿಗಳ ಅನುದಾನದ ಪೈಕಿ ಈ ಹಣದಲ್ಲಿ 6 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ವಿಜಯಪುರದಲ್ಲಿ 150 ಕೋಟಿ ರೂಪಾಯಿಗಳು, ಬಳ್ಳಾರಿಗೆ 127.5 ಕೋಟಿ ರೂಪಾಯಿ, ದಾವಣಗೆರೆಗೆ 127.5 ಕೋಟಿ ರೂಪಾಯಿ, ತುಮಕೂರಿಗೆ 175 ಕೋಟಿ ರೂಪಾಯಿ, ಶಿವಮೊಗ್ಗಕ್ಕೆ 127.5 ಕೋಟಿ, ಮಂಗಳೂರಿನಲ್ಲಿ 165 ಕೋಟಿ ರೂಪಾಯಿ, ಕಲಬುರಗಿಗೆ 127.5 ಕೋಟಿ ರೂಪಾಯಿ, ಬೆಳಗಾವಿಗೆ 127.5 ಕೋಟಿ ರೂಪಾಯಿ, ಹುಬ್ಬಳ್ಳಿ-ಧಾರವಾಡಕ್ಕೆ 152.50 ಕೋಟಿ ರೂಪಾಯಿಗಳು ಹಾಗೂ ರಾಯಚೂರು ಮಹಾನಗರ ಪಾಲಿಕೆಗೆ 200 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು