7:41 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

13/12/2025, 15:01

ಬೆಳಗಾವಿ, ಸುವರ್ಣ ವಿಧಾನಸೌಧ (reporterkarnataka.com):- ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಬ್ಬಯ್ಯ ಪ್ರಸಾದ್ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ lಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು.
ಆಕ್ಷೇಪಣೆ/ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದೂವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ. ರಾಜ್ಯಪಾಲರ ಕಚೇರಿಯೊಂದಿಗೆ ಈ ಕುರಿತು ಪತ್ರ ವ್ಯವಹಾರ ಸಹ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಚಿವರು ಸದನದಲ್ಲಿ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು