3:53 PM Sunday16 - March 2025
ಬ್ರೇಕಿಂಗ್ ನ್ಯೂಸ್
ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ… Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ… PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ… Forest Minister | ಬೇಲೂರು ಬಳಿ ಕಾಡಾನೆ ದಾಳಿಗೆ ಮಹಿಳೆ ಸಾವು; 3… ಗುಣಮಟ್ಟದ ಕಾನೂನು ಶಿಕ್ಷಣ ಅಗತ್ಯ: ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಪ್ರತಿಪಾದನೆ ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ.… ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪಘಾತ: ದೂರವಾಣಿ ಕರೆ ಮಾಡಿ… VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ…

ಇತ್ತೀಚಿನ ಸುದ್ದಿ

ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ ಸಲ್ಲಿಕೆ

16/03/2025, 15:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಪ್ರಸಿದ್ಧ ಕನ್ನಡ ಚಿತ್ರನಟ ರಮೇಶ್ ಅರವಿಂದ್ ಅವರು ಕುಟುಂಬ ಸಮೇತರಾಗಿ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತಾಧಿಕಾರಿ ಸುನೀಲ್ ಜೆ. ಗೌಡ್ರು ಅವರು ರಮೇಶ್ ಅರವಿಂದ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ದೇವಾಲಯದ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಅರ್ಚಕರಾದ ನಾಗೇಂದ್ರ ಕಾರಂತ್, ಸಿಬ್ಬಂದಿ ಸೂರ್ಯನಾರಾಯಣ ಹಾಗೂ ಸ್ಥಳೀಯ ಗ್ರಾಮಸ್ಥರು ಈ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದರು.
ಪೂಜಾ ಕಾರ್ಯಕ್ರಮವು ಶ್ರದ್ಧಾ ಮತ್ತು ಭಕ್ತಿಯ ವಾತಾವರಣದಲ್ಲಿ ನಡೆಯಿತು. ದೇವಾಲಯಕ್ಕೆ ಆಗಮಿಸಿದ ರಮೇಶ್ ಅರವಿಂದ್ ಅವರ ಅಭಿಮಾನಿಗಳು ಹಾಗೂ ಭಕ್ತರು ಅವರೊಂದಿಗೆ ಕ್ಷಣಕಾಲ ಸಂವಾದ ನಡೆಸಿ ಸಂತೋಷ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು