5:25 AM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಆಡಳಿತರೂಢ ಬಿಜೆಪಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ: ಸಿಂದಗಿಯಲ್ಲಿ ಕೇಸರಿಗೆ ಗೆಲುವು; ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಜಯ

02/11/2021, 16:03

ಬೆಂಗಳೂರು(reporterkarnataka.com): ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಒಂದೆಡೆ ಖುಷಿಯಾದರೆ ಇನ್ನೊಂದೆಡೆ ದುಃಖದ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೊದಲ ಅಗ್ನಿಪರೀಕ್ಷೆ ಇದಾಗಿತ್ತು.

ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಿಂದ ಆಡಳಿತರೂಢ ಬಿಜೆಪಿ ಗೆಲುವು ಸಾಧಿಸಿದರೆ, ಹಾನಗಲ್ ಕ್ಷೇತ್ರದಲ್ಲಿ ಕೇಸರಿ ಪಕ್ಷ ಕಾಂಗ್ರೆಸ್ ಎದುರು ಸೋಲು ಅನುಭವಿಸಿದೆ.

ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ.

ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿದ್ದರು.

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಶಿವರಾಜ್ ಸಜ್ಜನರ ಅವರು ಕಾಂಗ್ರೆಸ್ ಶ್ರೀನಿವಾಸ್ ಮಾನೆ ಎದುರು ಸೋಲು ಅನುಭವಿಸಿದ್ದಾರೆ. ಜೆಡಿಎಸ್ ನಿಂದ ನಿಯಾಜ್ ಶೇಕ್ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು