4:40 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆಡಳಿತರೂಢ ಬಿಜೆಪಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ: ಸಿಂದಗಿಯಲ್ಲಿ ಕೇಸರಿಗೆ ಗೆಲುವು; ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಜಯ

02/11/2021, 16:03

ಬೆಂಗಳೂರು(reporterkarnataka.com): ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಒಂದೆಡೆ ಖುಷಿಯಾದರೆ ಇನ್ನೊಂದೆಡೆ ದುಃಖದ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೊದಲ ಅಗ್ನಿಪರೀಕ್ಷೆ ಇದಾಗಿತ್ತು.

ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಿಂದ ಆಡಳಿತರೂಢ ಬಿಜೆಪಿ ಗೆಲುವು ಸಾಧಿಸಿದರೆ, ಹಾನಗಲ್ ಕ್ಷೇತ್ರದಲ್ಲಿ ಕೇಸರಿ ಪಕ್ಷ ಕಾಂಗ್ರೆಸ್ ಎದುರು ಸೋಲು ಅನುಭವಿಸಿದೆ.

ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ.

ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿದ್ದರು.

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಶಿವರಾಜ್ ಸಜ್ಜನರ ಅವರು ಕಾಂಗ್ರೆಸ್ ಶ್ರೀನಿವಾಸ್ ಮಾನೆ ಎದುರು ಸೋಲು ಅನುಭವಿಸಿದ್ದಾರೆ. ಜೆಡಿಎಸ್ ನಿಂದ ನಿಯಾಜ್ ಶೇಕ್ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು