6:18 AM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಆದರ್ಶ ಶಿಕ್ಷಕರಾದಾಗ ಮಾತ್ರ ಗುರು ಭಕ್ತಿಗೆ ಗೌರವ: ಶಾಸಕ ದರ್ಶನ್ ಧ್ರುವನಾರಾಯಣ್

06/09/2024, 20:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದೇಶದಲ್ಲಿ ಡಾ.ರಾಧಾಕೃಷ್ಣನ್ ರವರು ರಾಷ್ಟ್ರಪತಿಗಳಾಗಿ ಉತ್ತಮ ಸೇವೆ ಸಲ್ಲಿಸಿ ಶಿಕ್ಷಕರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತಿದೆ. ಅವರಿಗೆ ಪ್ರತಿಯೊಬ್ಬರು ಗೌರವವನ್ನು ಸಲ್ಲಿಸಿ ಅವರ ಕೊಡುಗೆಗಳನ್ನು ಸ್ಮರಿಸಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.


ಅವರು ನಂಜನಗೂಡಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ಡಾ. ಸರ್ವಪಲ್ಲಿ ರಾಧಾಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ನಾನು ವಕೀಲನಾಗಿ, ಶಾಸಕನಾಗಿ ನಿಂತಿದ್ದೇನೆ ಎಂದರೆ ಅದಕ್ಕೆ ಶಿಕ್ಷಕರೇ ಪ್ರಮುಖ ಕಾರಣರಾಗಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳ ಬಾಳಿಗೆ ಬೆಳಕನ್ನು ನೀಡುತ್ತಿರುವುದು ಶಿಕ್ಷಕರು ಮಾತ್ರ. ಮಕ್ಕಳು ಅವರ ಪೋಷಕರ ಜೊತೆ ಇರುವುದಕ್ಕಿಂತ ಶಿಕ್ಷಕರ ಜೊತೆಗೆ ಇರುವುದನ್ನು ಹೆಚ್ಚಾಗಿ ನಾವು ಕಾಣಬಹುದು. ಪ್ರತಿಯೊಬ್ಬ ಶಿಕ್ಷಕರು ಆದರ್ಶ ಶಿಕ್ಷಕರಾಗಿ ಸೇವೆ ಸಲ್ಲಿಸಿದಾಗ ಮಾತ್ರ ಶಿಕ್ಷಣಕ್ಕೆ ಮತ್ತು ಗುರುಗಳಿಗೆ ಗೌರವ ಲಭಿಸಲಿದೆ ಎಂದು ಹೇಳಿದರು.
ಓಪಿಎಸ್ ಕೇಳುವುದು ಶಿಕ್ಷಕರ ಹಕ್ಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪರಿಗಣನೆಗೆ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಓಪಿಎಸ್ ಜಾರಿಯಾಗಲಿದೆ. ಹಾಗೆ ನಂಜನಗೂಡು ಪಟ್ಟಣದಲ್ಲಿ ಗುರುಭವನ ನಿರ್ಮಾಣ ಮಾಡಲು ಈಗಾಗಲೇ 5 ಕೋಟಿ ರೂ.ಅನುದಾನವನ್ನು ನೀಡಲಾಗಿದೆ. ಮತ್ತೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಇನ್ನು ಹೆಚ್ಚಿನ ಅನುದಾನವನ್ನು ತಂದು ಉತ್ತಮವಾಗಿ ಗುರುಭವನದ ಕಟ್ಟಡವನ್ನು ನಿರ್ಮಾಣ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.
ತಾಲೂಕಿನಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಪಡೆದ ನಿವೃತ್ತ ಶಿಕ್ಷಕರಿಗೆ ಗೌರವಿಸಲಾಯಿತು. ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪಡೆದ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಶ್ರೀಕಂಠ ಸ್ವಾಮಿ, ನಗರಸಭಾ ಉಪಾಧ್ಯಕ್ಷೆ ರಿಹಾನ ಬಾನು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮುಖ್ಯ ಭಾಷಣಕಾರ ರಾಮಮೋಹನ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಹೇಶ್, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಬಾಲರಾಜ್, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮ ರತ್ನಾಕರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಂಗಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರ ಸೇರಿದಂತೆ ಶಿಕ್ಷಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು