4:05 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಆದಾಯ ತೆರಿಗೆ ಇಲಾಖೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯವಾದಿ ಬೆಳ್ತಂಗಡಿಯ ಹರ್ಷ ಕುಮಾರ್‌ ನೇಮಕ

10/07/2024, 16:37

ಮಂಗಳೂರು(reporterkarnataka.com): ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ಹಿರಿಯ ನ್ಯಾಯವಾದಿ ಹರ್ಷ ಕುಮಾರ್‌ ಅವರು ನೇಮಕವಾಗಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸೂಚನೆಯ ಮೇರೆಗೆ ಭಾರತ ಸರ್ಕಾರ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹರ್ಷ ಕುಮಾರ್ ಅವರನ್ನು ಈ ಹುದ್ದೆಗೆ ನೇಮಕ ಮಾಡಿದೆ.
ಆದಾಯ ತೆರಿಗೆ ಇಲಾಖೆಯ ಮಂಗಳೂರು ವಿಭಾಗದ ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ಪ್ರಕರಣಗಳಲ್ಲಿ ಹರ್ಷ ಕುಮಾರ್ ಅವರು ಆದಾಯ ತೆರಿಗೆ ಇಲಾಖೆಯನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪ್ರತಿನಿಧಿಸಲಿದ್ದಾರೆ.
ಮೂಲತಃ ಬೆಳ್ತಂಗಡಿಯ ಪಡಂಗಡಿಯ ನಡಿಬೆಟ್ಟು ಮನೆತನದವರಾದ ಹರ್ಷ ಕುಮಾರ್ ಮಂಗಳೂರು ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹರ್ಷ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು