1:22 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣ: ಹೈಕೋರ್ಟ್ ನಿಂದ ಸರ್ಕಲ್ ಇನ್ಸ್ ಪೆಕ್ಟರ್ ಗಂಗಿರೆಡ್ಡಿ ದೋಷಮುಕ್ತಿ

18/11/2022, 11:39

ಮಂಗಳೂರು(reporterkarnataka.com): ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಪೊಲೀಸ್ ವೃತ್ತ ನಿರೀಕ್ಷಕ ಗಂಗಿರೆಡ್ಡಿ ಅವರನ್ನು ರಾಜ್ಯ ಹೈಕೋರ್ಟ್ ದೋಷಮುಕ್ತಗೊಳಿಸಿದೆ.

ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಗಂಗಿ ರೆಡ್ಡಿ ಅವರು ಲಾಯಿಲದಲ್ಲಿ ಹೊಂದಿದ್ದ ಮನೆಗೆ 2009 ರ ಆ.27 ರಂದು ಆಗಿನ ಲೋಕಾಯುಕ್ತ ಡಿವೈಎಸ್‌ಪಿ ಸದಾನಂದ ವರ್ಣೇಕರ್ ಮತ್ತು ಅವರ ತಂಡ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ವೇತನ ಆದಾಯ ಹೊರತುಪಡಿಸಿ 19 ಲಕ್ಷ ರೂ. ಹೆಚ್ಚಿನ ಆಸ್ತಿ ಪತ್ತೆಯಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿತ್ತು. ತನಿಖೆ ಪೂರ್ಣಗೊಳಿಸಿದ್ದ ಲೋಕಾಯುಕ್ತ ಡಿವೈಎಸ್‌ಪಿ ಎಂ. ವಿಟ್ಟಲ್‌ದಾಸ್ ಪೈ ಅವರು ಗಂಗಿ ರೆಡ್ಡಿ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಗಂಗಿ ರೆಡ್ಡಿ ಅವರಿಗೆ 4 ವರ್ಷ ಸಾದಾ ಸಜೆ ಮತ್ತು 5 ಲಕ್ಷ ರೂ. ದಂಡ ವಿಧಿಸಿ 2020 ಆ.27ರಲ್ಲಿ ತೀರ್ಪು ನೀಡಿತ್ತು.

ತೀರ್ಪಿನ ವಿರುದ್ಧ ಗಂಗಿ ರೆಡ್ಡಿ ಅವರು ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಕೃಷಿ ಆದಾಯ, ಊರಿನಲ್ಲಿರುವ ಕಟ್ಟಡಗಳ ಬಾಡಿಗೆ, ಕುಟುಂಬದ ಆದಾಯದಲ್ಲಿ ದೊರೆತ ಚಿನ್ನ ಮಾರಾಟದ ಹಣದ ಲೆಕ್ಕಾಚಾರವನ್ನು ಲೋಕಾಯುಕ್ತ ನ್ಯಾಯಾಲಯ ತನಿಖೆ ವೇಳೆ ಪರಿಗಣಿಸಿರಲಿಲ್ಲ ಎಂಬ ಅಂಶವನ್ನು ಮುಂದಿಟ್ಟಿದ್ದರು. ಇದನ್ನು ಪರಿಗಣಿಸಿ ಹೈಕೋರ್ಟ್ ಗಂಗಿ ರೆಡ್ಡಿ ಅವರ ಶಿಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು