4:33 AM Wednesday7 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ…

ಇತ್ತೀಚಿನ ಸುದ್ದಿ

ಅಡ್ಡ ಗೋಡೆ ಮೇಲೆ ದೀಪ ಇಟ್ಟ ಹಾಗೆ ಲಾಕ್‌ಡೌನ್ : ತಿರುಗಾಡುವವರಿಗೆ ಬ್ರೇಕ್ ಇಲ್ಲ, ಸರಕಾರಿ ನಿಯಮಗಳಿಗೆ ತಲೆಬುಡ ಇಲ್ಲ.!!

30/04/2021, 22:47

ಮಂಗಳೂರು(reporterkarnataka): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯದಯಾಂತ ಲಾಕ್ ಡೌನ್ ಹೇರಿಕೆಯಾಗಿ 2 ದಿನ ಗಳು ಕಳೆದಿದೆ.
ಕೆಲವು ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಲಾಕ್ ಡೌನ್ ಜಾರಿಯಲ್ಲಿತ್ತು.

ಆದರೆ ನಗರದ ಹಲವು ಕಡೆಗಳಲ್ಲಿ ಅನಗತ್ಯ ತಿರುಗಾಟಗಳು ಹೆಚ್ಚಾಗಿದೆ. ಅಗತ್ಯ ಸೇವೆ ಹೊರತು ಪಡಿಸಿ ಇನ್ಯಾವ ಸೇವೆಗಳಿಗೂ ಅನುಮತಿ ಇಲ್ಲ, ಶಾಲಾ ಕಾಲೇಜು ಖಾಸಗಿ ಕಛೇರಿಗಳು ಬಂದ್ ಮಾಡುವಂತೆ ನಿರ್ಬಂಧವಿದ್ದರೂ., ಜನರು ನಗರಗಳಿಗೆ ಬರುತ್ತಿದ್ದಾರೆ. ಪೋಲಿಸರು ಅಲ್ಲಲ್ಲಿ ನಾಕಾಬಂದಿ ಹಾಕಿದ್ದರೂ ಲಾಕ್ ಡೌನ್‌ನ ಮಹತ್ವ ಜನರಿಗೆ ತಿಳಿದಿಲ್ಲವೇ. ಅಥವಾ ಇಲಾಖೆ ಮೈ ಮರೆತಿದೆಯೋ ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಗಮನಿಸಿ ಜನರೇ ಹಿಡಿ ಶಾಪ ಹಾಕುತ್ತಿದ್ದಾರೆ.

ಜನರೇ ಹೇಳುವಂತೆ ಪೊಲೀಸರು ತಪಾಸಣೆ ನಡೆಸುತ್ತಿಲ್ಲ. ಹಾಗಿದ್ದರೆ 54 ಕಡೆ ಔಟ್ ಪೋಸ್ಟ್ ಯಾತಕ್ಕಾಗಿ ಬರಿ ತೋರಿಕೆಗಾಗಿಯೇ. ಅನಗತ್ಯ ಕಾರುಗಳ ಓಡಾಟ ಜಾಸ್ತಿಯಾಗಿದೆ. ತುರ್ತು ಸೇವೆ ರಹಿತ ವಾಹನಗಳು ಓಡಾಡುತ್ತಲಿವೆ.ಕಾಲೇಜು ಬಂದ್ ಎಂದು ಸರ್ಕಾರವೇ ಘೋಷಿಸಿ ದ ಮೇಲೆ ಕೆಲವು ಕಡೆ ಓಪನ್ ಇದೆ ಗುಮಾನಿ ಹರಡಿದ್ಧು ಆತಂಕಕ್ಕೆ ಕಾರಣವಾಗಿದೆ. ಎಲ್ಲಾ ನಿಯಮಗಳನ್ನು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ಈ ಲಾಕ್‌ಡೌನ್ ಪರಿಣಾಮಕಾರಿಯಾಗುವುದು ಸಾಧ್ಯ ಇದೆಯೇ ? ಇದ್ಯಾವ ಲಾಕ್ ಡೌನ್ ಎಂಬುದು ಜನ ಸಾಮಾನ್ಯರ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು