9:02 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಅಡ್ಡ ಗೋಡೆ ಮೇಲೆ ದೀಪ ಇಟ್ಟ ಹಾಗೆ ಲಾಕ್‌ಡೌನ್ : ತಿರುಗಾಡುವವರಿಗೆ ಬ್ರೇಕ್ ಇಲ್ಲ, ಸರಕಾರಿ ನಿಯಮಗಳಿಗೆ ತಲೆಬುಡ ಇಲ್ಲ.!!

30/04/2021, 22:47

ಮಂಗಳೂರು(reporterkarnataka): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯದಯಾಂತ ಲಾಕ್ ಡೌನ್ ಹೇರಿಕೆಯಾಗಿ 2 ದಿನ ಗಳು ಕಳೆದಿದೆ.
ಕೆಲವು ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಲಾಕ್ ಡೌನ್ ಜಾರಿಯಲ್ಲಿತ್ತು.

ಆದರೆ ನಗರದ ಹಲವು ಕಡೆಗಳಲ್ಲಿ ಅನಗತ್ಯ ತಿರುಗಾಟಗಳು ಹೆಚ್ಚಾಗಿದೆ. ಅಗತ್ಯ ಸೇವೆ ಹೊರತು ಪಡಿಸಿ ಇನ್ಯಾವ ಸೇವೆಗಳಿಗೂ ಅನುಮತಿ ಇಲ್ಲ, ಶಾಲಾ ಕಾಲೇಜು ಖಾಸಗಿ ಕಛೇರಿಗಳು ಬಂದ್ ಮಾಡುವಂತೆ ನಿರ್ಬಂಧವಿದ್ದರೂ., ಜನರು ನಗರಗಳಿಗೆ ಬರುತ್ತಿದ್ದಾರೆ. ಪೋಲಿಸರು ಅಲ್ಲಲ್ಲಿ ನಾಕಾಬಂದಿ ಹಾಕಿದ್ದರೂ ಲಾಕ್ ಡೌನ್‌ನ ಮಹತ್ವ ಜನರಿಗೆ ತಿಳಿದಿಲ್ಲವೇ. ಅಥವಾ ಇಲಾಖೆ ಮೈ ಮರೆತಿದೆಯೋ ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಗಮನಿಸಿ ಜನರೇ ಹಿಡಿ ಶಾಪ ಹಾಕುತ್ತಿದ್ದಾರೆ.

ಜನರೇ ಹೇಳುವಂತೆ ಪೊಲೀಸರು ತಪಾಸಣೆ ನಡೆಸುತ್ತಿಲ್ಲ. ಹಾಗಿದ್ದರೆ 54 ಕಡೆ ಔಟ್ ಪೋಸ್ಟ್ ಯಾತಕ್ಕಾಗಿ ಬರಿ ತೋರಿಕೆಗಾಗಿಯೇ. ಅನಗತ್ಯ ಕಾರುಗಳ ಓಡಾಟ ಜಾಸ್ತಿಯಾಗಿದೆ. ತುರ್ತು ಸೇವೆ ರಹಿತ ವಾಹನಗಳು ಓಡಾಡುತ್ತಲಿವೆ.ಕಾಲೇಜು ಬಂದ್ ಎಂದು ಸರ್ಕಾರವೇ ಘೋಷಿಸಿ ದ ಮೇಲೆ ಕೆಲವು ಕಡೆ ಓಪನ್ ಇದೆ ಗುಮಾನಿ ಹರಡಿದ್ಧು ಆತಂಕಕ್ಕೆ ಕಾರಣವಾಗಿದೆ. ಎಲ್ಲಾ ನಿಯಮಗಳನ್ನು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ಈ ಲಾಕ್‌ಡೌನ್ ಪರಿಣಾಮಕಾರಿಯಾಗುವುದು ಸಾಧ್ಯ ಇದೆಯೇ ? ಇದ್ಯಾವ ಲಾಕ್ ಡೌನ್ ಎಂಬುದು ಜನ ಸಾಮಾನ್ಯರ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು