6:03 PM Saturday17 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ಅಡ್ಡ ಗೋಡೆ ಮೇಲೆ ದೀಪ ಇಟ್ಟ ಹಾಗೆ ಲಾಕ್‌ಡೌನ್ : ತಿರುಗಾಡುವವರಿಗೆ ಬ್ರೇಕ್ ಇಲ್ಲ, ಸರಕಾರಿ ನಿಯಮಗಳಿಗೆ ತಲೆಬುಡ ಇಲ್ಲ.!!

30/04/2021, 22:47

ಮಂಗಳೂರು(reporterkarnataka): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯದಯಾಂತ ಲಾಕ್ ಡೌನ್ ಹೇರಿಕೆಯಾಗಿ 2 ದಿನ ಗಳು ಕಳೆದಿದೆ.
ಕೆಲವು ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಲಾಕ್ ಡೌನ್ ಜಾರಿಯಲ್ಲಿತ್ತು.

ಆದರೆ ನಗರದ ಹಲವು ಕಡೆಗಳಲ್ಲಿ ಅನಗತ್ಯ ತಿರುಗಾಟಗಳು ಹೆಚ್ಚಾಗಿದೆ. ಅಗತ್ಯ ಸೇವೆ ಹೊರತು ಪಡಿಸಿ ಇನ್ಯಾವ ಸೇವೆಗಳಿಗೂ ಅನುಮತಿ ಇಲ್ಲ, ಶಾಲಾ ಕಾಲೇಜು ಖಾಸಗಿ ಕಛೇರಿಗಳು ಬಂದ್ ಮಾಡುವಂತೆ ನಿರ್ಬಂಧವಿದ್ದರೂ., ಜನರು ನಗರಗಳಿಗೆ ಬರುತ್ತಿದ್ದಾರೆ. ಪೋಲಿಸರು ಅಲ್ಲಲ್ಲಿ ನಾಕಾಬಂದಿ ಹಾಕಿದ್ದರೂ ಲಾಕ್ ಡೌನ್‌ನ ಮಹತ್ವ ಜನರಿಗೆ ತಿಳಿದಿಲ್ಲವೇ. ಅಥವಾ ಇಲಾಖೆ ಮೈ ಮರೆತಿದೆಯೋ ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಗಮನಿಸಿ ಜನರೇ ಹಿಡಿ ಶಾಪ ಹಾಕುತ್ತಿದ್ದಾರೆ.

ಜನರೇ ಹೇಳುವಂತೆ ಪೊಲೀಸರು ತಪಾಸಣೆ ನಡೆಸುತ್ತಿಲ್ಲ. ಹಾಗಿದ್ದರೆ 54 ಕಡೆ ಔಟ್ ಪೋಸ್ಟ್ ಯಾತಕ್ಕಾಗಿ ಬರಿ ತೋರಿಕೆಗಾಗಿಯೇ. ಅನಗತ್ಯ ಕಾರುಗಳ ಓಡಾಟ ಜಾಸ್ತಿಯಾಗಿದೆ. ತುರ್ತು ಸೇವೆ ರಹಿತ ವಾಹನಗಳು ಓಡಾಡುತ್ತಲಿವೆ.ಕಾಲೇಜು ಬಂದ್ ಎಂದು ಸರ್ಕಾರವೇ ಘೋಷಿಸಿ ದ ಮೇಲೆ ಕೆಲವು ಕಡೆ ಓಪನ್ ಇದೆ ಗುಮಾನಿ ಹರಡಿದ್ಧು ಆತಂಕಕ್ಕೆ ಕಾರಣವಾಗಿದೆ. ಎಲ್ಲಾ ನಿಯಮಗಳನ್ನು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ಈ ಲಾಕ್‌ಡೌನ್ ಪರಿಣಾಮಕಾರಿಯಾಗುವುದು ಸಾಧ್ಯ ಇದೆಯೇ ? ಇದ್ಯಾವ ಲಾಕ್ ಡೌನ್ ಎಂಬುದು ಜನ ಸಾಮಾನ್ಯರ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು