9:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಡ್ಡ ಗೋಡೆ ಮೇಲೆ ದೀಪ ಇಟ್ಟ ಹಾಗೆ ಲಾಕ್‌ಡೌನ್ : ತಿರುಗಾಡುವವರಿಗೆ ಬ್ರೇಕ್ ಇಲ್ಲ, ಸರಕಾರಿ ನಿಯಮಗಳಿಗೆ ತಲೆಬುಡ ಇಲ್ಲ.!!

30/04/2021, 22:47

ಮಂಗಳೂರು(reporterkarnataka): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯದಯಾಂತ ಲಾಕ್ ಡೌನ್ ಹೇರಿಕೆಯಾಗಿ 2 ದಿನ ಗಳು ಕಳೆದಿದೆ.
ಕೆಲವು ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಲಾಕ್ ಡೌನ್ ಜಾರಿಯಲ್ಲಿತ್ತು.

ಆದರೆ ನಗರದ ಹಲವು ಕಡೆಗಳಲ್ಲಿ ಅನಗತ್ಯ ತಿರುಗಾಟಗಳು ಹೆಚ್ಚಾಗಿದೆ. ಅಗತ್ಯ ಸೇವೆ ಹೊರತು ಪಡಿಸಿ ಇನ್ಯಾವ ಸೇವೆಗಳಿಗೂ ಅನುಮತಿ ಇಲ್ಲ, ಶಾಲಾ ಕಾಲೇಜು ಖಾಸಗಿ ಕಛೇರಿಗಳು ಬಂದ್ ಮಾಡುವಂತೆ ನಿರ್ಬಂಧವಿದ್ದರೂ., ಜನರು ನಗರಗಳಿಗೆ ಬರುತ್ತಿದ್ದಾರೆ. ಪೋಲಿಸರು ಅಲ್ಲಲ್ಲಿ ನಾಕಾಬಂದಿ ಹಾಕಿದ್ದರೂ ಲಾಕ್ ಡೌನ್‌ನ ಮಹತ್ವ ಜನರಿಗೆ ತಿಳಿದಿಲ್ಲವೇ. ಅಥವಾ ಇಲಾಖೆ ಮೈ ಮರೆತಿದೆಯೋ ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಗಮನಿಸಿ ಜನರೇ ಹಿಡಿ ಶಾಪ ಹಾಕುತ್ತಿದ್ದಾರೆ.

ಜನರೇ ಹೇಳುವಂತೆ ಪೊಲೀಸರು ತಪಾಸಣೆ ನಡೆಸುತ್ತಿಲ್ಲ. ಹಾಗಿದ್ದರೆ 54 ಕಡೆ ಔಟ್ ಪೋಸ್ಟ್ ಯಾತಕ್ಕಾಗಿ ಬರಿ ತೋರಿಕೆಗಾಗಿಯೇ. ಅನಗತ್ಯ ಕಾರುಗಳ ಓಡಾಟ ಜಾಸ್ತಿಯಾಗಿದೆ. ತುರ್ತು ಸೇವೆ ರಹಿತ ವಾಹನಗಳು ಓಡಾಡುತ್ತಲಿವೆ.ಕಾಲೇಜು ಬಂದ್ ಎಂದು ಸರ್ಕಾರವೇ ಘೋಷಿಸಿ ದ ಮೇಲೆ ಕೆಲವು ಕಡೆ ಓಪನ್ ಇದೆ ಗುಮಾನಿ ಹರಡಿದ್ಧು ಆತಂಕಕ್ಕೆ ಕಾರಣವಾಗಿದೆ. ಎಲ್ಲಾ ನಿಯಮಗಳನ್ನು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ಈ ಲಾಕ್‌ಡೌನ್ ಪರಿಣಾಮಕಾರಿಯಾಗುವುದು ಸಾಧ್ಯ ಇದೆಯೇ ? ಇದ್ಯಾವ ಲಾಕ್ ಡೌನ್ ಎಂಬುದು ಜನ ಸಾಮಾನ್ಯರ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು