5:02 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಸಾಮಾನ್ಯ ವರ್ಗಕ್ಕೆ ಸೇರ್ಪಡೆ: ದೈವಜ್ಞ ಬ್ರಾಹ್ಮಣ ಸಮುದಾಯದಿಂದ ಶಾಸಕ ವೇದವ್ಯಾಸ ಕಾಮತ್ ಗೆ ಮನವಿ

23/07/2025, 20:50

ಮಂಗಳೂರು(reporterkarnataka.com):ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಕರ್ನಾಟಕ ಸರಕಾರದ ಶಿಕ್ಷಣದ‌ RTE, ಸ್ಕಾಲರ್ಶಿಪ್ ಇತ್ಯಾದಿಗೆ ಸಂಬಂಧಿಸಿದ SATS ವೆಬ್ ಸೈಟ್ ನಲ್ಲಿ, ಇತರೆ ಹಿಂದುಳಿದ ವರ್ಗ 2ಎ ದಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿರುವುದು ಅನ್ಯಾಯವಾಗಿದ್ದು, ಕೂಡಲೇ ಸರ್ಕಾರದ ಗಮನಕ್ಕೆ ತಂದು ನ್ಯಾಯ ಒದಗಿಸುವಂತೆ ದೈವಜ್ಞ ಬ್ರಾಹ್ಮಣರ ಚಿನ್ನ – ಬೆಳ್ಳಿ ಕೆಲಸಗಾರರ ಸಂಘ (ರಿ.) ದ ಮುಖಂಡರು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸಮುದಾಯದ ಮುಖಂಡರ ಅಹವಾಲನ್ನು ಆಲಿಸಿದ ಶಾಸಕರು, ಇದುವರೆಗೂ ದೈವಜ್ಞ ಬ್ರಾಹ್ಮಣ ಸಮಾಜವು ಸಾಮಾಜಿಕವಾಗಿ ಒಬಿಸಿ 2ಎ ಪ್ರವರ್ಗದಲ್ಲಿ ಇತ್ತು. ಅದೇ ರೀತಿಯಲ್ಲಿ ಜಾತಿ ಪ್ರಮಾಣ ಪತ್ರವನ್ನೂ ಸಹ ಪಡೆಯಲಾಗಿದೆ. ಆದರೂ ರಾಜ್ಯ ಕಾಂಗ್ರೆಸ್ ಸರ್ಕಾರವು ಏಕಪಕ್ಷೀಯವಾಗಿ 2025 ರ ಹೊಸ ದಾಖಲಾತಿ ಪ್ರಕ್ರಿಯೆಯಲ್ಲಿ ದೈವಜ್ಞ ಬ್ರಾಹ್ಮಣ ಸಮುದಾಯವನ್ನು (519) ಓಬಿಸಿಯಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿದೆ. ಯಾವ ಆಧಾರದಲ್ಲಿ ಹೀಗೆ ಮಾಡಲಾಗಿದೆ ಎಂಬ ಸಮಾಜದ ಮುಖಂಡರ ಪ್ರಶ್ನೆ ನ್ಯಾಯಯುತವಾದುದು. ಈ ಬಗ್ಗೆ ಖಂಡಿತವಾಗಿಯೂ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ರಾಜ್ಯ ಸರ್ಕಾರದ ಗಮನವನ್ನು ಸೆಳೆಯುತ್ತೇನೆ. ಹೊಸ ದಾಖಲಾತಿ ಪ್ರಕ್ರಿಯೆಯಲ್ಲಿನ ಲೋಪದೋಷವನ್ನು ಸರಿಪಡಿಸಿ ಸಮುದಾಯಕ್ಕೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರವೀಂದ್ರ ಜಿ. ಗೋಕರ್ಣಕರ್, ಕಾರ್ಯದರ್ಶಿ ದರ್ಶನ್ ಸಿ.ಶೇಟ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಜಿ. ಶೇಟ್, ಚೇತನ್ ಶೇಟ್, ಅರುಣ್ ಜಿ ಶೇಟ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು