7:23 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

06/08/2024, 23:06

ಬೆಂಗಳೂರು(reporterkarnataka.com): ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು.
ಭ್ರಷ್ಟ ಕಾಂಗ್ರೆಸ್ ಸರಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂದು ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್‌ನವರು ಅನೇಕ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ. ಯಡಿಯೂರಪ್ಪನವರು, ಬಿಜೆಪಿ ಸರಕಾರವು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡುತ್ತಿತ್ತು ಎಂದು ವಿವರಿಸಿದರು.
ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1 ಲಕ್ಷ 95 ಸಾವಿರ ಕೋಟಿ ಸಾಲವನ್ನು ಸಿದ್ದರಾಮಯ್ಯನವರ ಸರಕಾರ ಮಾಡಿದೆ ಎಂದು ಟೀಕಿಸಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಇಂದ್ರೇಶ್ ಕುಮಾರ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ಮಾಜಿ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು. ರಾಜ್ಯದ ವಿವಿಧ ಭಾಗಗಳಿಂದ ಬಂದ ಕಾರ್ಯಕರ್ತರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು