9:40 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

06/08/2024, 23:06

ಬೆಂಗಳೂರು(reporterkarnataka.com): ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು.
ಭ್ರಷ್ಟ ಕಾಂಗ್ರೆಸ್ ಸರಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂದು ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್‌ನವರು ಅನೇಕ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ. ಯಡಿಯೂರಪ್ಪನವರು, ಬಿಜೆಪಿ ಸರಕಾರವು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡುತ್ತಿತ್ತು ಎಂದು ವಿವರಿಸಿದರು.
ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1 ಲಕ್ಷ 95 ಸಾವಿರ ಕೋಟಿ ಸಾಲವನ್ನು ಸಿದ್ದರಾಮಯ್ಯನವರ ಸರಕಾರ ಮಾಡಿದೆ ಎಂದು ಟೀಕಿಸಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಇಂದ್ರೇಶ್ ಕುಮಾರ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ಮಾಜಿ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು. ರಾಜ್ಯದ ವಿವಿಧ ಭಾಗಗಳಿಂದ ಬಂದ ಕಾರ್ಯಕರ್ತರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು