2:30 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಅಧಿವೇಶನ ಆರಂಭದ ಹಿಂದಿನ ರಾತ್ರಿ ಮೈಕ್ ಚೆಕ್ ಮಾಡಲು ಹೋದಾಗ ತೆಗೆದ ಫೋಟೋ: ವಿವಾದ ಕುರಿತು ಸ್ಪೀಕರ್ ಖಾದರ್ ಮಂಗಳೂರಿನಲ್ಲಿ ಸ್ಪಷ್ಟನೆ

29/07/2024, 13:36

ಮಂಗಳೂರು(reporterkarnataka.com): ವಿಧಾನಸೌಧಕ್ಕೆ ಅತಿಥಿಗಳು, ವಿದ್ಯಾರ್ಥಿಗಳು ಬಂದಾಗಲೆಲ್ಲ ಅಲ್ಲೇ ಫೋಟೋ ತೆಗೀತ್ತೀವಿ. ಇದರಲ್ಲಿ ‌ತಪ್ಪು ಹುಡುಕೋ ಪ್ರಯತ್ನ ಬೇಡ, ಫೋಟೋ ತೆಗೀಬಾರದು ಅಂತ ಏನೂ ಇಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದಾರೆ.
ಸ್ಪೀಕರ್ ಪೀಠದ ಎದುರು ಕಾಂಗ್ರೆಸ್ ನಾಯಕರ ಜೊತೆ ಖಾದರ್ ಫೋಟೋ ವೈರಲ್ ಆದ ವಿಚಾರದ ಬಗ್ಗೆ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದರು.
ಅಧಿವೇಶನ ನಡೆಯುವಾಗ ತೆಗೆದ ಫೋಟೋ ಅಲ್ಲ. ಅಧಿವೇಶನ ನಡೆಯುವ ಮೊದಲು ರಾತ್ರಿ ತೆಗೆದ ಫೋಟೋ ಅದು. ನಾನು ಅಧಿವೇಶನದ ಮೊದಲು ಮೈಕ್ ಚೆಕ್ ಮಾಡಲು ರಾತ್ರಿ ಹೋಗಿದ್ದೆ. ಆಗ ಮಂಗಳೂರಿನ ಮಾಜಿ ಮೇಯರ್ ಒಬ್ಬರು ತೆಗೆದ ಫೋಟೋ ಅದು ಎಂದು ಖಾದರ್ ಹೇಳಿದರು.
ಶಿರೂರು ಘಟನೆ ಬಗ್ಗೆ ಎಲ್ಲರಿಗೂ ಬಹಳಷ್ಟು ಬೇಸರ ಇದೆ. ಕೇರಳದ ಶಾಸಕರು, ಎಂಪಿಗಳು ನನ್ನನ್ನು ಸಂಪರ್ಕ ಮಾಡಿದ್ದಾರೆ. ಆದಷ್ಟು ಬೇಗ ಮೃತದೇಹ ಸಿಗಲಿ, ಗೌರವಯುತ ಅಂತ್ಯ ಸಂಸ್ಕಾರ ಅಗಲಿ ಎಂದು ಅವರು ನುಡಿದರು.
ವಿಧಾನಸಭೆ ಅಧಿವೇಶನದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. 9 ದಿನಗಳಲ್ಲಿ 8 ದಿವಸ ಅಧಿವೇಶನ ನಡೆದಿದೆ. ರಾಜ್ಯದಲ್ಲಿ ಮಳೆ, ನೆರೆ, ಪ್ರವಾಹ ಸೇರಿ ಅನೇಕ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಶೂನ್ಯ ವೇಳೆ ಸೇರಿ ಹಲವು ಅವಧಿಗಳಲ್ಲಿ ಚರ್ಚೆಗಳು ಆಗಿವೆ. ಆದರೆ ಹೆಚ್ಚಿನ ಚರ್ಚೆ ಆಗಿಲ್ಲ ಅನ್ನೋ ವಿಷಾದ ನನಗಿದೆ. ಮೂರು‌ ತಿಂಗಳಿಗೊಮ್ಮೆ ಅಧಿವೇಶನ ಆಗೋವಾಗ ಜನರ ಸಮಸ್ಯೆಗೆ ಮಹತ್ವ ಕೊಡಬೇಕು. ಜನರ ಬಗ್ಗೆ ಹೆಚ್ಚಿನ ಚರ್ಚೆ ಆಗಬೇಕು. ಬೇರೆ ವಿಷಯ ಯಾವಾಗಲೂ ಮಾತನಾಡಬಹುದು ಎಂದು ಸ್ಪೀಕರ್ ನುಡಿದರು.
ತುಳು ಭಾಷೆ ಪ್ರಸ್ತಾಪವಾದ ಬಗ್ಗೆ ಮಾತನಾಡಿದ ಅವರು, ಒಂದು ಭಾಷೆಯ ಮಹತ್ವ, ಇತಿಹಾಸ, ಸಂಸ್ಕೃತಿ, ಪರಂಪರೆ ರಾಜ್ಯದ ಜನರಿಗೆ ಪರಿಚಯ ಆಗಬೇಕು. ಅಧಿವೇಶನದಲ್ಲಿ ಇದನ್ನು ಯಾರೂ ಅಪಹಾಸ್ಯ ಮಾಡಿಲ್ಲ, ಆದರೆ ಸಣ್ಣ ಸಣ್ಣ ಮಾತು‌ ಬರುತ್ತೆ. ತುಳು ಅಕಾಡೆಮಿ ಈ ನಿಟ್ಟಿನಲ್ಲಿ ಇಡೀ ರಾಜ್ಯದಲ್ಲಿ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು